May 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

ಉಜಿರೆ: ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ ನಡೆಯುವ 5ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆಯು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಶಾಸಕ ಹರೀಶ್ ಪೂಂಜರವರು ಉದ್ಘಾಟನೆಗೊಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯದ ಮುಖ್ಯಸ್ಥರಾದ ಡಾ.ಕೃಷ್ಣಪ್ರಸಾದ್ ಅವರು ಭಾಗವಹಿಸಿ ಬೆಳ್ತಂಗಡಿ ತಾಲೂಕಿನಲ್ಲಿ ನಡೆಯುವ ಎಲ್ಲಾ ಜನಪರ ವಿಶೇಷ ಕಾರ್ಯಕ್ರಮಗಳು ಇನ್ನೂ ಮುಂದೆಯೂ ಶಾಸಕರ ನೇತೃತ್ವದಲ್ಲಿ ನಡೆಯಲಿ. ನಾವೆಲ್ಲಾ ಹಿಂದೂ ಎಲ್ಲಾ ಸಮುದಾಯದವರು ನನ್ನವರು ಎಂದು ಭಾವನೆ ಇನ್ನಷ್ಟೂ ಮೂಡಲಿ ಎಂದ ಅವರು ಶಾಸಕರ ಪತ್ರಮುಖೇನಾ ನಮ್ಮ ನೇತ್ರಾಲಯಕ್ಕೆ ಯಾರಾದರೂ ಅಂಧ ವ್ಯಕ್ತಿಗಳು ಬಂದರೆ ಅಂತವರಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗುವುದು, ಶಾಸಕರ ಸಹಯೋಗದೊಂದಿಗೆ ಬೆಳ್ತಂಗಡಿಯನ್ನು ಅಂಧಮುಕ್ತವನ್ನಾಗಿ ಮಾಡಲಾಗುವುದು‌ ಎಂದರು.

ಈ ಸಂದರ್ಭದಲ್ಲಿ ಖ್ಯಾತ ವಕೀಲರಾದ ಉಮೇಶ್ ಟಿ, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಮನ್ ಕಿ ಭಾತ್ ಪ್ರಮುಖರಾದ ಸೀತಾರಾಮ ಬೆಳಾಲು, ಬಿಜೆಪಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಹರೀಸದ್ ಕಳೆಂಜ, ಯಶವಂತ್ ಪುದುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಾಳಾದ ಉಷಾ ಕಾರಂತ್, ಪುಷ್ಪ ಆರ್ ಶೆಟ್ಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ, ವಿಷು ಕಣಿ ಆಚರಣಾ ಸಮಿತಿಯವರಾದ ಅನಿಲ್ ಶಿಬಾಜೆ, ಬಾಲಕೃಷ್ಣ ನೈಮಿಷ, ಪ್ರಸಾದ್ ಬಿ.ಎಸ್, ದಿವಿನೇಶ್ ಹಾಗೂ ಸದಸ್ಯರು, ಮುಖಂಡರಾದ ಸದಾನಂದ ಉಂಗಿಲಬೈಲು, ಸುಪ್ರಿತ್ ಜೈನ್, ಶಶಿಕಲಾ ಅರಳಿ,ಪ್ರಸಾದ್ ಕೆವಿ, ಉಪಸ್ಥಿತರಿದ್ದರು‌‌.

Related posts

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!