August 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು ಬಂದಿದೆ.

ನೌಫಲ್ ಕಾರ್ಯನಿಮಿತ್ತ ಲಿಫ್ಟ್‌ನಲ್ಲಿ ಮೇಲಕ್ಕೆ ಹೋಗುವಾಗ ಒಂದನೇ ಮಹಡಿ ಮತ್ತು ನೆಲಮಹಡಿ ಮಧ್ಯಭಾಗದಲ್ಲಿ ಲಿಫ್ಟ್ ಕೆಟ್ಟು ನಿಂತಿದೆ. ಈ ಸಂದರ್ಭ ನೌಫಲ್ ಅವರು ಲಿಫ್ಟ್ ನಲ್ಲಿ ಬಾಕಿಯಾಗಿರುವ ಬಗ್ಗೆ ಮಾಹಿತಿ ಪಡೆದ ಅಲ್ಲಿದ್ದ ಸಹೋದ್ಯೋಗಿಗಳು ರಕ್ಷಣೆಗೆ ಧಾವಿಸಿದ್ದಾರೆ.

ಒಂದನೇ ಮಹಡಿಯಲ್ಲಿ ಲಿಫ್ಟ್‌ನ ಅರ್ಧಭಾಗ ಇದ್ದ ಕಾರಣ ಲಿಫ್ಟ್ ಬಾಗಿಲು ಬಲವಂತದಿಂದ ತೆರೆದು ನೌಫಲ್ ರಕ್ಷಣೆಗೆ ಮುಂದಾಗಿದ್ದಾರೆ. ಕೈ ಹಿಡಿದು ಮೇಲೆತ್ತುವ ಸಂದರ್ಭ ಏಕಾಏಕಿ ಲಿಫ್ಟ್ ಚಲಿಸಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ನೌಫಲ್ ಮೃತರಾಗಿದ್ದಾರೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related posts

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ: ಮನಸೆಳೆದ 8 ವರ್ಷದ ಪೋರನ ಆಟಿ ಕಳೆಂಜ ವೇಷ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya
error: Content is protected !!