26.9 C
ಪುತ್ತೂರು, ಬೆಳ್ತಂಗಡಿ
May 17, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು ಬಂದಿದೆ.

ನೌಫಲ್ ಕಾರ್ಯನಿಮಿತ್ತ ಲಿಫ್ಟ್‌ನಲ್ಲಿ ಮೇಲಕ್ಕೆ ಹೋಗುವಾಗ ಒಂದನೇ ಮಹಡಿ ಮತ್ತು ನೆಲಮಹಡಿ ಮಧ್ಯಭಾಗದಲ್ಲಿ ಲಿಫ್ಟ್ ಕೆಟ್ಟು ನಿಂತಿದೆ. ಈ ಸಂದರ್ಭ ನೌಫಲ್ ಅವರು ಲಿಫ್ಟ್ ನಲ್ಲಿ ಬಾಕಿಯಾಗಿರುವ ಬಗ್ಗೆ ಮಾಹಿತಿ ಪಡೆದ ಅಲ್ಲಿದ್ದ ಸಹೋದ್ಯೋಗಿಗಳು ರಕ್ಷಣೆಗೆ ಧಾವಿಸಿದ್ದಾರೆ.

ಒಂದನೇ ಮಹಡಿಯಲ್ಲಿ ಲಿಫ್ಟ್‌ನ ಅರ್ಧಭಾಗ ಇದ್ದ ಕಾರಣ ಲಿಫ್ಟ್ ಬಾಗಿಲು ಬಲವಂತದಿಂದ ತೆರೆದು ನೌಫಲ್ ರಕ್ಷಣೆಗೆ ಮುಂದಾಗಿದ್ದಾರೆ. ಕೈ ಹಿಡಿದು ಮೇಲೆತ್ತುವ ಸಂದರ್ಭ ಏಕಾಏಕಿ ಲಿಫ್ಟ್ ಚಲಿಸಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ನೌಫಲ್ ಮೃತರಾಗಿದ್ದಾರೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related posts

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya
error: Content is protected !!