July 18, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

ಉಜಿರೆ: “ಸೇವಾಭಾವನೆ, ಮಾನವೀಯತೆ ಹಾಗೂ ಜನರ ಆರೋಗ್ಯದ ಕಡೆಗಿನ ಸಮರ್ಪಣೆ ಎಲ್ಲರಿಗೂ ಪ್ರೇರಣೆಯಾಗಿದೆ. ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ” ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್‌ನ ಆಡಳಿತ ನಿರ್ದೇಶಕ ಡಾ| ಗೋಪಾಲ ಕೃಷ್ಣ ಕೆ. ಹೇಳಿದರು.

ಅವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಸುವರ್ಣ ಮಹೋತ್ಸವ ಸಮಿತಿ, ಜಯನಗರ-ಗುರಿಪಳ್ಳ ಇವರ ಪ್ರಾಯೋಜಕತ್ವದಲ್ಲಿ, ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ, ಆಳ್ವಾಸ್ ಹೆಲ್ತ್ ಸೆಂಟರ್, ಮೂಡಬಿದಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾದ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರದಲ್ಲಿ ಒಟ್ಟು 152 ಮಂದಿ ಆರೋಗ್ಯ ತಪಾಸಣೆಗೊಳಪಟ್ಟಿದ್ದು, 84 ಯುನಿಟ್ ರಕ್ತ ಸಂಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ದೇವರ ಕಿರೀಟಕ್ಕೆ ಚಿನ್ನದ ಸತ್ತಿಗೆ ಅರ್ಪಿಸುವ ನೂತನ ಕಾರ್ಯಕ್ರಮದ ಕೂಪನ್‌ನ್ನು ವಿಧ್ಯುಕ್ತವಾಗಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದಾನಂದ ಪೂಜಾರಿ, ಕೋಡ್ಕಲ್, ಅಧ್ಯಕ್ಷರು, ಸುವರ್ಣ ಮಹೋತ್ಸವ ಸಮಿತಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರೋ/ ಶ್ರೀಧರ್ ಕೆ.ಪಿ., ನಿಯೋಜಿತ ಅಧ್ಯಕ್ಷರು, ರೋಟರಿ ಕ್ಲಬ್ ಬೆಳ್ತಂಗಡಿ, ಡಾ ವಿಶ್ವ ವಿಜೇತ್ MBBS, DLO, DNB (ENT Surgeon), ಮಂಗಳೂರು ವೆನ್ಲಾಕ್ಆಸ್ಪತ್ರೆ, ಮಂಗಳೂರು, ಡಾ ಗಣೇಶ್ ಪ್ರಸಾದ್, Asst. Prof. & Medical Officer, ವಾ.ಸಾ.ಪ. ಬೆಂದೆ ಮತ್ತು ಪಶ್ಚಿಮ ವಲಯ, ಧರ್ಮಸ್ಥಳ, ಡಾ ಅಶೋಕ್ ಕೆ.ಎನ್., MD ಹಾಗೂ ಡಾ ಕುಮಾರ್ ಪಾಟೀಲ, ಎಚ್.ಡಿ.ಸಿ. ಆಸ್ಪತ್ರೆ, ಉಜಿರೆ ಭಾಗವಹಿಸಿದ್ದರು.ಶಿಬಿರದಲ್ಲಿ ಡಾ ಅಶ್ವಿನ್ ರಾವ್ (MBBS, DNB), ಡಾ ಅಂಕಿತ್ ಜಿ. ಭಟ್ (MBBS, MS, DNB, FMAS), ಡಾ ರೋಹಿತ್ ಜಿ. ಭಟ್ (MBBS, MS Ortho), ಡಾ ಸ್ನೇಹ ಭಟ್ (MBBS, MS, DNB, FRM) ಹಾಗೂ ಡಾ ರಂಜನ್ ಪ್ರಭು (MBBS, DCH) ಸೇರಿದಂತೆ ವಿವಿಧ ತಜ್ಞ ವೈದ್ಯರು ಪಾಲ್ಗೊಂಡು ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಿದರು.

ಕಾರ್ಯಕ್ರಮದ ಯಶಸ್ವಿಗಾಗಿ ರಮಾನಂದ ಶರ್ಮ,ಪ್ರಕಾಶ್ ಕುಮಾರ್, ಸಂತೋಷ್ ಗೋಳಿದೊಟ್ಟು, ಚೇತನ್ ಶೆಟ್ಟಿ ಗುರಿಪಳ್ಳ, ಶಿವಪ್ರಸಾದ್ ಕೆರಿಮಾರ್, ಭರತ ಕುಮಾರ್, ಬಾಲಕೃಷ್ಣ ಗೌಡ, ಮುಂತಾದವರು ಶ್ರಮಿಸಿದರು. ಗುರುರಾಜ ಪೂಜಾರಿ ಗುರಿಪಳ್ಳ ಸ್ವಾಗತಿಸಿ, ನವೀನ್ ಶೆಟ್ಟಿ ಗುತ್ತಿಲಾರಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!