July 26, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ಇದರ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರ್ಲಕಟ್ಟೆ, ಮಂಗಳೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯ ಲೆಫ್ಟಿನೆಂಟ್ ಜನರಲ್ ಜಿನೋಜ್ ಪುತ್ತೆನ್ ಪರಂಭಿಲ್ ಉದ್ಘಾಟಿಸಿದರು. ಗಡಿಯಲ್ಲಿ ದೇಶವನ್ನು ಕಾಪಾಡುವ ಯೋಧರಂತೆ, ರಕ್ತದಾನಿಗಳು ಜೀವವನ್ನು ಉಳಿಸುವ ಸೈನಿಕರು ಎಂದು ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದರು.

ವೇದಿಕೆಯಲ್ಲಿ ಪುಣ್ಯಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು, ಎಸ್‌ಎಂವೈಎಂ ಅಧ್ಯಕ್ಷ ಜಿತು, ಉಪಾಧ್ಯಕ್ಷೆ ದಿಶಾ, ಸಿಸ್ಟರ್ ಲಿಸ್ ಮಾತ್ಯು, ಮಾತೃವೇದಿಕೆಯ ಸುಜಾ ಜೇಮ್ಸ್, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸೊಸೈಟಿಯ ಸನ್ನಿ, ಟ್ರಸ್ಟಿಗಳಾದ ಜಾನ್ಸನ್ ಹಾಗೂ ರಾಜೇಶ್, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಡಾ. ಮಂಜುಷ ಮೊದಲಾದವರು ಉಪಸ್ಥಿತರಿದ್ದರು.ಅನೇಕ ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ರಕ್ತದಾನ ಮಾಡಿ ಕಾರ್ಯಕ್ರಮಕ್ಕೆ ಯಶಸ್ಸು ತಂದರು. ಸಮಾಜ ಸೇವೆಯೊಂದಿಗೆ ಜೀವ ರಕ್ಷಿಸುವ ಮಹತ್ವದ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಅಭಿನಂದನೆಗಳು ವ್ಯಕ್ತವಾಗಿವೆ.

Related posts

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!