24.2 C
ಪುತ್ತೂರು, ಬೆಳ್ತಂಗಡಿ
June 10, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ಇದರ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರ್ಲಕಟ್ಟೆ, ಮಂಗಳೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯ ಲೆಫ್ಟಿನೆಂಟ್ ಜನರಲ್ ಜಿನೋಜ್ ಪುತ್ತೆನ್ ಪರಂಭಿಲ್ ಉದ್ಘಾಟಿಸಿದರು. ಗಡಿಯಲ್ಲಿ ದೇಶವನ್ನು ಕಾಪಾಡುವ ಯೋಧರಂತೆ, ರಕ್ತದಾನಿಗಳು ಜೀವವನ್ನು ಉಳಿಸುವ ಸೈನಿಕರು ಎಂದು ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದರು.

ವೇದಿಕೆಯಲ್ಲಿ ಪುಣ್ಯಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು, ಎಸ್‌ಎಂವೈಎಂ ಅಧ್ಯಕ್ಷ ಜಿತು, ಉಪಾಧ್ಯಕ್ಷೆ ದಿಶಾ, ಸಿಸ್ಟರ್ ಲಿಸ್ ಮಾತ್ಯು, ಮಾತೃವೇದಿಕೆಯ ಸುಜಾ ಜೇಮ್ಸ್, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸೊಸೈಟಿಯ ಸನ್ನಿ, ಟ್ರಸ್ಟಿಗಳಾದ ಜಾನ್ಸನ್ ಹಾಗೂ ರಾಜೇಶ್, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಡಾ. ಮಂಜುಷ ಮೊದಲಾದವರು ಉಪಸ್ಥಿತರಿದ್ದರು.ಅನೇಕ ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ರಕ್ತದಾನ ಮಾಡಿ ಕಾರ್ಯಕ್ರಮಕ್ಕೆ ಯಶಸ್ಸು ತಂದರು. ಸಮಾಜ ಸೇವೆಯೊಂದಿಗೆ ಜೀವ ರಕ್ಷಿಸುವ ಮಹತ್ವದ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಅಭಿನಂದನೆಗಳು ವ್ಯಕ್ತವಾಗಿವೆ.

Related posts

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!