August 16, 2026
ಧಾರ್ಮಿಕವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ. ವೀರೇಂದ್ರ ಹೆಗ್ಗಡೆಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16ರಂದು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು.

ಬೆಳಗ್ಗೆ ಶ್ರೀ ದೇವರಿಗೆ ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ ರಾತ್ರಿ ಪ್ರಸನ್ನ ರಂಗ ಪೂಜೆ ಮತ್ತು ಶ್ರೀದೇವರ ಉತ್ಸವ ಬಲಿ ನಡೆಯಿತು. ವಾರ್ಷಿಕ ಮಹಾಸಭೆ ಹಾಗೂ ಲೆಕ್ಕ ಪತ್ರ ಮಂಡಿಸಲಾಯಿತು. ದೇವಸ್ಥಾನದಲ್ಲಿ ಕುಮಾರಿ ಕೃಷ್ಣಪ್ರಿಯಾ ಆಚಾರ್ ಮುರುಳ್ಯ ಇವರಿಂದ ಸಂಗೀತ ಕಚೇರಿ ಹಾಗೂ ಸಮರ್ಥ್ ಪರ್ಲತ್ತಾಯ ಮಾಯಾ ಇವರಿಂದ ಕೊಳಲು ವಾದನ, ಸುಪ್ರೀತಾ ಕೋರ್ನಾಯ ಇವರಿಂದ ಪಿಟೀಲು ವಾದನ ವರ್ಚಸ್ ಕೋರ್ನಾಯ ಧರ್ಮಸ್ಥಳ ಇವರಿಂದ ಮೃದಂಗ ವಾದನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅಸ್ರಣ್ಣರಾದ ಗಿರೀಶ್ ಭಾರಿತ್ತಾಯ ಪಾರಲ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಗೌಡ ವಕೀಲರು, ಉಪಾಧ್ಯಕ್ಷರಾದ ಮಮತಾ ದಿನೇಶ್ ಪೂಜಾರಿ ಉಪ್ಪಾರ್, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆಮ್ಮಣ್ಣಾಯ, ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಮಹಿಳಾ ಸಮಿತಿಯ ಗೌರವಾಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಮಹಿಳಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಶ್ರೀನಿವಾಸ ಗೌಡ ಗಣಪನಗುತ್ತು, ಭಜನಾ ಮಂಡಳಿ ಅಧ್ಯಕ್ಷರಾದ ಹರೀಶ್ ಪೋಸೊಟ್ಟು, ಸಮಿತಿ ಹಿರಿಯ ಸದಸ್ಯರಾದ ಬೆಳಾಲು ಗುತ್ತು ಮನೆಯ ಹೇಮಲತಾ ಜೀವಂದರ್ ಕುಮಾರ್ ಜೈನ್,ಉದಿತ್ ಕುಮಾರ್ ಜೈನ್ ಕುಜುಂಬೊಟ್ಟು, ದೇಜಪ್ಪ ಗೌಡ ಅರಣೆಮಾರು ,ಲಿಂಗಪ್ಪ ಪೂಜಾರಿ ಬನಂದೂರು, ಬಾಬು ಗೌಡ ಅಲಕ್ಕೆ ದಡ್ಡ, ಸರೋಜಿನಿ ಬೀಮಂಡೆ , ದೇವಸ್ಥಾನದ ಲೆಕ್ಕಪರಿಶೋಧಕರಾದ ನಾರಾಯಣಗೌಡ ಎಳ್ಳುಗದ್ದೆ, ಹಾಗೂ ಸದಸ್ಯರಾದ ಶ್ರೀನಿವಾಸ ಗೌಡ ಗಣಪನ ಗುತ್ತು, ಸುಂದರ ಎಂ ಕೆ ಬೆಳಾಲು, ಜಾರಪ್ಪ ಗೌಡ ಅರಣೆ ಮಾರು ಹಾಗೂ ಸಮಿತಿ ಸದಸ್ಯರು ಭಜನ ಮಂಡಳಿ ಸದಸ್ಯರು ಮಹಿಳಾ ಸಮಿತಿ ಸದಸ್ಯರು ಹಾಗೂ ಬೈಲುವಾರು ಸಂಚಾಲಕರು ಹಾಗೂ ಸಹ ಸಂಚಾಲಕರು ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ಸಂಪನ್ನಗೊಂಡಿತು.

Related posts

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

Suddi Udaya
error: Content is protected !!