28.1 C
ಪುತ್ತೂರು, ಬೆಳ್ತಂಗಡಿ
September 10, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ಇದರ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರ್ಲಕಟ್ಟೆ, ಮಂಗಳೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯ ಲೆಫ್ಟಿನೆಂಟ್ ಜನರಲ್ ಜಿನೋಜ್ ಪುತ್ತೆನ್ ಪರಂಭಿಲ್ ಉದ್ಘಾಟಿಸಿದರು. ಗಡಿಯಲ್ಲಿ ದೇಶವನ್ನು ಕಾಪಾಡುವ ಯೋಧರಂತೆ, ರಕ್ತದಾನಿಗಳು ಜೀವವನ್ನು ಉಳಿಸುವ ಸೈನಿಕರು ಎಂದು ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದರು.

ವೇದಿಕೆಯಲ್ಲಿ ಪುಣ್ಯಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು, ಎಸ್‌ಎಂವೈಎಂ ಅಧ್ಯಕ್ಷ ಜಿತು, ಉಪಾಧ್ಯಕ್ಷೆ ದಿಶಾ, ಸಿಸ್ಟರ್ ಲಿಸ್ ಮಾತ್ಯು, ಮಾತೃವೇದಿಕೆಯ ಸುಜಾ ಜೇಮ್ಸ್, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸೊಸೈಟಿಯ ಸನ್ನಿ, ಟ್ರಸ್ಟಿಗಳಾದ ಜಾನ್ಸನ್ ಹಾಗೂ ರಾಜೇಶ್, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಡಾ. ಮಂಜುಷ ಮೊದಲಾದವರು ಉಪಸ್ಥಿತರಿದ್ದರು.ಅನೇಕ ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ರಕ್ತದಾನ ಮಾಡಿ ಕಾರ್ಯಕ್ರಮಕ್ಕೆ ಯಶಸ್ಸು ತಂದರು. ಸಮಾಜ ಸೇವೆಯೊಂದಿಗೆ ಜೀವ ರಕ್ಷಿಸುವ ಮಹತ್ವದ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಅಭಿನಂದನೆಗಳು ವ್ಯಕ್ತವಾಗಿವೆ.

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!