July 26, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ಇದರ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರ್ಲಕಟ್ಟೆ, ಮಂಗಳೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯ ಲೆಫ್ಟಿನೆಂಟ್ ಜನರಲ್ ಜಿನೋಜ್ ಪುತ್ತೆನ್ ಪರಂಭಿಲ್ ಉದ್ಘಾಟಿಸಿದರು. ಗಡಿಯಲ್ಲಿ ದೇಶವನ್ನು ಕಾಪಾಡುವ ಯೋಧರಂತೆ, ರಕ್ತದಾನಿಗಳು ಜೀವವನ್ನು ಉಳಿಸುವ ಸೈನಿಕರು ಎಂದು ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದರು.

ವೇದಿಕೆಯಲ್ಲಿ ಪುಣ್ಯಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು, ಎಸ್‌ಎಂವೈಎಂ ಅಧ್ಯಕ್ಷ ಜಿತು, ಉಪಾಧ್ಯಕ್ಷೆ ದಿಶಾ, ಸಿಸ್ಟರ್ ಲಿಸ್ ಮಾತ್ಯು, ಮಾತೃವೇದಿಕೆಯ ಸುಜಾ ಜೇಮ್ಸ್, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸೊಸೈಟಿಯ ಸನ್ನಿ, ಟ್ರಸ್ಟಿಗಳಾದ ಜಾನ್ಸನ್ ಹಾಗೂ ರಾಜೇಶ್, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಡಾ. ಮಂಜುಷ ಮೊದಲಾದವರು ಉಪಸ್ಥಿತರಿದ್ದರು.ಅನೇಕ ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ರಕ್ತದಾನ ಮಾಡಿ ಕಾರ್ಯಕ್ರಮಕ್ಕೆ ಯಶಸ್ಸು ತಂದರು. ಸಮಾಜ ಸೇವೆಯೊಂದಿಗೆ ಜೀವ ರಕ್ಷಿಸುವ ಮಹತ್ವದ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಅಭಿನಂದನೆಗಳು ವ್ಯಕ್ತವಾಗಿವೆ.

Related posts

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
error: Content is protected !!