August 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು ಬಂದಿದೆ.

ನೌಫಲ್ ಕಾರ್ಯನಿಮಿತ್ತ ಲಿಫ್ಟ್‌ನಲ್ಲಿ ಮೇಲಕ್ಕೆ ಹೋಗುವಾಗ ಒಂದನೇ ಮಹಡಿ ಮತ್ತು ನೆಲಮಹಡಿ ಮಧ್ಯಭಾಗದಲ್ಲಿ ಲಿಫ್ಟ್ ಕೆಟ್ಟು ನಿಂತಿದೆ. ಈ ಸಂದರ್ಭ ನೌಫಲ್ ಅವರು ಲಿಫ್ಟ್ ನಲ್ಲಿ ಬಾಕಿಯಾಗಿರುವ ಬಗ್ಗೆ ಮಾಹಿತಿ ಪಡೆದ ಅಲ್ಲಿದ್ದ ಸಹೋದ್ಯೋಗಿಗಳು ರಕ್ಷಣೆಗೆ ಧಾವಿಸಿದ್ದಾರೆ.

ಒಂದನೇ ಮಹಡಿಯಲ್ಲಿ ಲಿಫ್ಟ್‌ನ ಅರ್ಧಭಾಗ ಇದ್ದ ಕಾರಣ ಲಿಫ್ಟ್ ಬಾಗಿಲು ಬಲವಂತದಿಂದ ತೆರೆದು ನೌಫಲ್ ರಕ್ಷಣೆಗೆ ಮುಂದಾಗಿದ್ದಾರೆ. ಕೈ ಹಿಡಿದು ಮೇಲೆತ್ತುವ ಸಂದರ್ಭ ಏಕಾಏಕಿ ಲಿಫ್ಟ್ ಚಲಿಸಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ನೌಫಲ್ ಮೃತರಾಗಿದ್ದಾರೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!