July 4, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.17 ರಂದು ರಾತ್ರಿ 7:30 ಕ್ಕೆ ದಾಳಿ ಮಾಡಿದ್ದಾರೆ.

ಜೂಜಾಟ ಆಡುತ್ತಿದ್ದ ಪಡಂಗಡಿಯ ಅಶೋಕ್(37) ,ಪಡಂಗಡಿಯ ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35), ವೇಣೂರು ಕತ್ತೋಡಿಬೈಲಿನ ರಮೇಶ್(40) , ಕುಕ್ಕೇಡಿ ಬರ್ನತ್ಯಾರಿನ ರಾಜೇಶ್(42), ಕಾರ್ಕಳ ಮುಗಿರಡ್ಡಸ ಪ್ರಮೀತ್(35), ನಾರಾವಿ ಅರಸಿಕಟ್ಟೆಯ ಕರುಣಾಕರ(38), ವೇಣೂರು ಶಿವಾಜಿನಗರದ ಶೇಖರ್(50), ಮರೋಡಿಯ ಸಧಾಕರ(42), ಗರ್ಡಾಡಿಯ ನವಾಜ್(26), ಗೇರುಕಟ್ಟೆ ಜನತಾಕಾಲೋನಿಯ ಇಕ್ಬಾಲ್(37), ಕುಕ್ಕೇಡಿಯ ಕಿರಣ್(35), ವೇಣೂರು ಶಿವಾಜಿನಗರದ ಲಕ್ಷ್ಮಣ(51), ಬೆಳ್ತಂಗಡಿ ಲಾಯಿಲದ ನಿಸಾರ್(47), ಬೆಳ್ತಂಗಡಿ ತೆಂಕಎಡಪದವು ಜೀವಂಧರ್ ಕುಮಾರ್(36), ಗುರುವಾಯನಕೆರೆಯ ಸಂತೋಷ್(37), ಸೊಣಂದೂರು ಅಬ್ದುಲ್ ಅಜೀಜ್(40) ಬಂಧಿತ 17 ಮಂದಿ ಆರೋಪಿಗಳು.

ಆರೋಪಿಗಳು ಜೂಜಾಟಕ್ಕೆ ಬಳಸಿದ 69 ಸಾವಿರ ರೂಪಾಯಿ ಹಣ , ಎರಡು ಆಟೋ ರಿಕ್ಷಾ, 20 ಮೊಬೈಲ್ ಫೋನ್ ವಶಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ 17 ಮಂದಿ ಆರೋಪಿಗಳ ವಿರುದ್ಧ ಕಲಂ 87 ಕೆ.ಪಿ.ಆಕ್ಟ್,112 BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ, ಎಎಸ್ಐ ವೆಂಕಟೇಶ್,ಸಿಬ್ಬಂದಿ ಅಬ್ದುಲ್ ಲತೀಫ್, ಕೃಷ್ಣ, ವಸಂತ, ಮೋಹನ, ರಾಕೇಶ್, ಕಾಳಮ್ಮ, ಕಾವೇರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya
error: Content is protected !!