29 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

ಉಡುಪಿ: ಮಧುಮೇಹ ರೋಗಿಗಳಲ್ಲಿ ಪಾದದ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ, ಗಂಭೀರ ಪರಿಣಾಮಗಳು ಹಾಗೂ ಅಂಗಚ್ಛೇದನವನ್ನು ತಡೆಗಟ್ಟುವ ಉದ್ದೇಶದಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಕುತ್ಪಾಡಿ, ಉಡುಪಿ ಇದರ ಶಲ್ಯತಂತ್ರ ವಿಭಾಗವು, PRIAS (Podiatry Reach Across India for Awareness and Screening) ಸಂಸ್ಥೆಯ ಸಹಯೋಗದಲ್ಲಿ, 2026ರ ಮೇ 20 ಮತ್ತು ಮೇ 23ರಂದು ಉಡುಪಿಯ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರವನ್ನು ಆಯೋಜಿಸಿದೆ.

ಮಧುಮೇಹದಿಂದಾಗಿ ಪಾದಗಳಲ್ಲಿ ಉಂಟಾಗುವ ನರಗಳ ಸಂವೇದನೆ ಕುಂಠಿತವಾಗುವುದು, ರಕ್ತಪ್ರವಾಹದ ಅಡಚಣೆ ಹಾಗೂ ಪಾದದ ಮೇಲಿನ ಅಸಾಮಾನ್ಯ ಒತ್ತಡದಿಂದ ಹುಣ್ಣುಗಳು ಉಂಟಾಗುವಂತಹ ಸಮಸ್ಯೆಗಳು ಅನೇಕ ಬಾರಿ ಗಂಭೀರ ಸ್ಥಿತಿಗೆ ತಲುಪುತ್ತವೆ. ಇವುಗಳನ್ನು ಸಮಯೋಚಿತ ತಪಾಸಣೆಯ ಮೂಲಕ ತಡೆಗಟ್ಟಬಹುದಾಗಿದೆ.

ಶಿಬಿರದಲ್ಲಿ ಭಾಗವಹಿಸುವ ರೋಗಿಗಳಿಗೆ ಆಧುನಿಕ ತಪಾಸಣಾ ಸಾಧನಗಳ ಮೂಲಕ ಕೆಳಕಂಡ ಪರೀಕ್ಷೆಗಳು ನಡೆಸಲಾಗುತ್ತದೆ:
ಪಾದದ ತಳಭಾಗದ ನರಗಳ ಸಂವೇದನೆ (Neuropathy) ತಪಾಸಣೆ, ಕಾಲುಗಳಿಗೆ ರಕ್ತಪ್ರವಾಹ ಸಮರ್ಪಕವಾಗಿದೆಯೇ ಎಂಬುದನ್ನು ತಿಳಿಯುವ ABI ಪರೀಕ್ಷೆ, ಪಾದದ ಮೇಲೆ ಅಸಾಮಾನ್ಯ ಒತ್ತಡದಿಂದಾಗಿ (Abnormal loading) ಕಾರ್ನ್ (Corn) ಅಥವಾ ಕಾಲೋಸಿಟಿ (Callosity) ಉಂಟಾಮಾಡುವ ಸಾಧ್ಯತೆ ಇರುವುದನ್ನು ಪತ್ತೆಹಚ್ಚುವುದು. ಪಾದದ ಹುಣ್ಣನ್ನು ತಡೆಗಟ್ಟುವುದು.

ಮಧುಮೇಹ ರೋಗಿಗಳಲ್ಲಿ ಪಾದದ ಹುಣ್ಣು ಮತ್ತು ಅಂಗಚ್ಛೇದನದ ಅಪಾಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಶಿಬಿರ ಅತ್ಯಂತ ಉಪಯುಕ್ತವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಭಾರತದಾದ್ಯಂತ ೬೭ ನಗರಗಳಲ್ಲಿ ಈ ವಿಶೇಷ ಶಿಬಿರ ನಡೆಯುತ್ತಿದೆ. ಸೂಕ್ತ ಮಧುಮೇಹ ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅಗತ್ಯವಿರುವ ರೋಗಿಗಳನ್ನು ಶಿಬಿರಕ್ಕೆ ಕಳುಹಿಸುವಂತೆ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Related posts

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!