29 C
ಪುತ್ತೂರು, ಬೆಳ್ತಂಗಡಿ
August 22, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಕಾಲೇಜು: ವಿಟಿಯು ಅಂತರ್ ವಲಯ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಅಂತರ್ ಕಾಲೇಜುಗಳ ಪುರುಷರ ಕಬ್ಬಡ್ಡಿ ಪಂದ್ಯಾಟದ ಮುಕ್ತಾಯದ ಬಳಿಕ ಆಯೋಜಿಸಲಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ್ ವಲಯಗಳ ಕಾಲೇಜುಗಳ ರಾಜ್ಯ ಮಟ್ಟದ ಪುರುಷರ ಕಬ್ಬಡ್ಡಿ ಪಂದ್ಯಾಟ ಕ್ಕೆ ಚಾಲನೆ ನೀಡಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕಬ್ಬಡಿ ತರಬೇತುದಾರ ರವೀಂದ್ರ ಶೆಟ್ಟಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ಕಬ್ಬಡಿ ದೇಶಿಯ ಕ್ರೀಡೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಯನ್ನು ಹವ್ಯಾಸವಾಗಿ ರೂಪಿಸಿಕೊಂಡು ನಿರಂತರ ಆಸಕ್ತಿ ಮತ್ತು ಪರಿಶ್ರಮದಿಂದ ಸಾಗಿದ್ದರೆ ಕಬ್ಬಡಿಯಂತ ಕ್ರೀಡೆಗಳಲ್ಲಿ ಭವಿಷ್ಯವನ್ನು ಕಂಡುಕೊಳ್ಳಬಹುದು. ಕಬ್ಬಡಿ ಕ್ಷೇತ್ರಕ್ಕೆ ಇಂದು ಪ್ರೋ ಕಬ್ಬಡಿಯ ಬಳಿಕ ಜಗದ್ವ್ಯಾಪಿ ಮನ್ನಣೆ ದೊರೆಯುತ್ತಿರುವ ಜೊತೆಗೆ ವಿಫುಲವಾದ ಅವಕಾಶಗಳು ತೆರೆದುಕೊಂಡಿದೆ.

ಕಬ್ಬಡಿ ಕ್ರೀಡೆ ಮತ್ತಷ್ಟು ಜಾಗತಿಕ ಮಟ್ಟದಲ್ಲಿ ಬೆಳಗಲು ಪ್ರತಿಯೊಬ್ಬ ಕಬ್ಬಡಿ ಕ್ರೀಡಾ ಪಟುವಿನ ಕೊಡುಗೆ ಅಗತ್ಯವಿದೆ. ಪ್ರತಿಭೆ ಹಾಗೂ ಸ್ವಾ ಸಾಮಾರ್ಥ್ಯದಿಂದ ಸಾಧನೆಯತ್ತ ಹೆಜ್ಜೆ ಹಾಕಿದರೆ ವಿದ್ಯಾಸಂಸ್ಥೆ ಮತ್ತು ಸಮಾಜ ನಮ್ಮ ಕಲೆಯನ್ನು ಗುರುತಿಸಿ ಗೌರವಿಸುತ್ತದೆ. ಕ್ರೀಡಾ ಪಟುಗಳು ತಮ್ಮ ಬದುಕಿನುದ್ದಕ್ಕೂ ಶಿಸ್ತಿನ ಚೌಕಟ್ಟನ್ನು ಮೀರಬಾರದು ಎಂದು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮತ್ತೊರ್ವ ಅತಿಥಿ ಬೆಳ್ತಂಗಡಿ ವಿಭಾಗದ ಡೆಪ್ಯುಟಿ ರೇಂಜ್ ಅರಣ್ಯ ಅಧಿಕಾರಿ ರಂಜಿತ್ ಕುಮಾರ್ ಎಸ್ ಮಾತನಾಡಿ, ಕ್ರೀಡಾ ಪಟುಗಳು ಎದುರಾಗುವ ಸೋಲುಗಳಿಗೆ ಚಿಂತಿರಾಗಬಾರದು. ಕ್ಷಣಿಕ ಸೋಲನ್ನು ಮರೆತು ಯಶಸ್ಸಿನ ಹಾದಿಯೆಡೆಗೆ‌ ಹಪಾಪಿಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಸ್ವಶಕ್ತಿ ಮತ್ತು ಪ್ರತಿಭೆಯ ಜೊತೆಗೆ ನಿರಂತರ ಪ್ರಯತ್ನದಿಂದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ಮಾತನಾಡಿ, ಕಬ್ಬಡಿ ಕ್ರೀಡೆ ವಿಶೇಷ ಸಾಮಾರ್ಥ್ಯ ಮತ್ತು ಕೌಶಲ್ಯದಿಂದ ಸಾಗಿಬರುವ ಆಟ. ಕ್ರೀಡೆಯ ಮೇಲಿನ ಆಸಕ್ತಿಯೇ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ ಎಂದು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

ಅಂತರ್ ವಲಯಗಳ ಅಂತರ್ ಕಾಲೇಜು ರಾಜ್ಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯದ ಬೆಂಗಳೂರು, ಬೆಳಗಾವಿ, ಕಲಬುರ್ಗಿ,ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 16 ತಂಡಗಳು ಭಾಗವಹಿಸಿದ್ದವು.

ಕಾರ್ಯಕ್ರಮದ ವೇದಿಕೆಯಲ್ಲಿ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ರಾಷ್ಟ್ರೀಯ ಮಟ್ಟದ ಕಬಡ್ಡಿ ತೀರ್ಪುಗಾರರಾದ ಕೃಷ್ಣಾನಂದ್ ರಾವ್ ಹಾಗು ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕಾಲೇಜಿನ ತಂಡಗಳು ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಉಜಿರೆಯ ಎಸ್ .ಡಿ.ಎಂ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಾದ ಕಲ್ಪಿತ ಹಾಗು ಅನಿಶ್ ಕಲ್ಮಾಡಿ ನಿರೂಪಿಸಿ, ವಂದಿಸಿದರು. ಪುರುಷರ ಕಬಡ್ಡಿ ಪಂದ್ಯಾಟವನ್ನು ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಭಾಕರ್ ಸಂಯೋಜಿಸಿ, ತಾಂತ್ರಿಕ ಮಹಾವಿದ್ಯಾಲಯ ಉಪನ್ಯಾಸಕರು ಸಹಕರಿಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮೌಲ್ಯಯುತ ಶಿಕ್ಷಣ ನೀಡುವುದರ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ವಿಶೇಷ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡುತ್ತಿದೆ. ಕಳೆದ ಅನೇಕ ವರ್ಷಗಳಿಂದ ಹಲವು ಕ್ರೀಡಾ ಪಟುಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಬೆಳೆಸಿದೆ. ವಿಶೇಷವಾಗಿ ಕಬ್ಬಡಿ ಕ್ಷೇತ್ರದ ಪ್ರೋ ಕಬ್ಬಡಿ ಪಂದ್ಯಾಟಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಿಂದ ಆರು ಜನ ಕ್ರೀಡಾ ಪಟುಗಳನ್ನು ನೀಡಿರುವುದು ಹೆಮ್ಮೆಯ ಸಂಗತಿ. ಸಂಸ್ಥೆಯ ಮತ್ತಷ್ಟು ಕ್ರೀಡಾ ಪಟುಗಳು ರಾಷ್ಟ್ರ ಮಟ್ಟದಲ್ಲಿ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ.
– ರವೀಂದ್ರ ಶೆಟ್ಟಿ ಅಂತಾರಾಷ್ಟ್ರೀಯ ತರಬೇತುದಾರ

Related posts

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!