27.1 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಮೇ 5ರಂದು ಲಾಯಿಲ ಗ್ರಾಮದ ಕರ್ನೋಡಿ ಆಕೆಶಿಯ ನೆಡುತೋಪಿನಲ್ಲಿ, ಸುಮಾರು 40-45 ವರ್ಷದ ಅಪರಿಚಿತ ಗಂಡಸು ಲುಂಗಿಯನ್ನು ಹಗ್ಗದಂತೆ ಮಾಡಿಕೊಂಡು, ಕಾಟು ಜಾತಿಯ ಮರದ ಕೊಂಬೆಗೆ ಮತ್ತು ಕುತ್ತಿಗೆಗೆ ಕಟ್ಟಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ವಾರೀಸುದಾರರು ಪತ್ತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಮನವಿ ಮಾಡಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಠಾಣಾ ಯು.ಡಿ.ಆರ್ ನಂಬ್ರ: 24/2026 ಕಲಂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಮೃತರ ವಯಸ್ಸು ಸುಮಾರು 40-45 ವರ್ಷ, ಎತ್ತರ 5ಅಡಿ 5 ಇಂಚು, ಚಹರೆ ಸಾಧಾರಣ ಶರೀರ, ಬಲ ಕೈಯ ಕೋಲು ಕೈಯ ಮುಂಭಾಗದ ಒಳ ಭಾಗದಲ್ಲಿ ಹಸಿರು ಮಿಶ್ರಿತ ಕಪ್ಪು ಬಣ್ಣದಲ್ಲಿ “ಕೃಷ್ಣ” ದೇವರ ಹಚ್ಚೆ ಇದ್ದು, ಅದರ ಕೆಳಗೆ ಆಂಗ್ಲ ಭಾಷೆಯಲ್ಲಿ “B” ಅಕ್ಷರವನ್ನು ಬರೆಯಲಾಗಿದೆ.

ಮೃತ ಗಂಡಸಿನ ವಿಳಾಸ ಅಥವಾ ವಾರೀಸುದಾರರು ಪತ್ತೆಯಾದಲ್ಲಿ ದ.ಕ ಜಿಲ್ಲಾ ಕಂಟ್ರೋಲ್ ರೂಂ ಅಥವಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಸಂಪರ್ಕ ಸಂಖ್ಯೆ: ದ.ಕ ಜಿಲ್ಲಾ ಕಂಟ್ರೋಲ್ ರೂಂ : 9480805300 ಬೆಳ್ತಂಗಡಿ ಪೊಲೀಸ್ ಠಾಣೆ: 08256-232093., ಪೊಲೀಸ್ ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆ : 9480805370.

Related posts

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya
error: Content is protected !!