29.3 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮುಂಡಾಜೆ: ಕೀರ್ತನಾ ಕಲಾ ತಂಡ ಮುಂಡಾಜೆ ಇದರ ವತಿಯಿಂದ ತಂಡದ ವಿದ್ಯಾರ್ಥಿ ಸದಸ್ಯರಿಗೆ ಉಚಿತ ಪುಸ್ತಕಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧು ಶೆಟ್ಟಿ ಹುರ್ತಾಜೆ ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಪುಸ್ತಕದ ಪ್ರಾಯೋಜಕರಾದ ಹರೀಶ್ ಪೂಜಾರಿಯವರು ಮಕ್ಕಳಿಗೆ ಪುಸ್ತಕ ವಿತರಿಸಿದರು. ಮುಖ್ಯ ಅತಿಥಿ ನಂದೀಶ್ ಭಂಡಾರಿ ಕೆ ಮಕ್ಕಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಸ್ತಕವನ್ನು ನೀಡಿದ ಹರೀಶ್ ಪೂಜಾರಿ ಹಾಗೂ ನಂದೀಶ್ ಭಂಡಾರಿ ಕೆ ಇವರನ್ನು ಗೌರವ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಈ ವೇಳೆ ಗ್ರಾಮದಲ್ಲಿ ನಿಧನರಾದ ವಿಠಲ್ ರಾವ್ ಸಂಪಿಗೆ ಹಾಗೂ ಬಾಬು ಶೆಟ್ಟಿ ಭಾವಂತಬೆಟ್ಟು ಇವರ ಸ್ಮರಿಸಿ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತಂಡದ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ, ಪುರಂದರ ಗೌಡ, ತಂಡದ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ಕೇಶವ ಪೂಜಾರಿ ವಂದಿಸಿದರು. ಜಿತಿಕ್ಷಾ ನಿರೂಪಿಸಿದರು.

Related posts

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya
error: Content is protected !!