26.8 C
ಪುತ್ತೂರು, ಬೆಳ್ತಂಗಡಿ
May 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.17 ರಂದು ರಾತ್ರಿ 7:30 ಕ್ಕೆ ದಾಳಿ ಮಾಡಿದ್ದಾರೆ.

ಜೂಜಾಟ ಆಡುತ್ತಿದ್ದ ಪಡಂಗಡಿಯ ಅಶೋಕ್(37) ,ಪಡಂಗಡಿಯ ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35), ವೇಣೂರು ಕತ್ತೋಡಿಬೈಲಿನ ರಮೇಶ್(40) , ಕುಕ್ಕೇಡಿ ಬರ್ನತ್ಯಾರಿನ ರಾಜೇಶ್(42), ಕಾರ್ಕಳ ಮುಗಿರಡ್ಡಸ ಪ್ರಮೀತ್(35), ನಾರಾವಿ ಅರಸಿಕಟ್ಟೆಯ ಕರುಣಾಕರ(38), ವೇಣೂರು ಶಿವಾಜಿನಗರದ ಶೇಖರ್(50), ಮರೋಡಿಯ ಸಧಾಕರ(42), ಗರ್ಡಾಡಿಯ ನವಾಜ್(26), ಗೇರುಕಟ್ಟೆ ಜನತಾಕಾಲೋನಿಯ ಇಕ್ಬಾಲ್(37), ಕುಕ್ಕೇಡಿಯ ಕಿರಣ್(35), ವೇಣೂರು ಶಿವಾಜಿನಗರದ ಲಕ್ಷ್ಮಣ(51), ಬೆಳ್ತಂಗಡಿ ಲಾಯಿಲದ ನಿಸಾರ್(47), ಬೆಳ್ತಂಗಡಿ ತೆಂಕಎಡಪದವು ಜೀವಂಧರ್ ಕುಮಾರ್(36), ಗುರುವಾಯನಕೆರೆಯ ಸಂತೋಷ್(37), ಸೊಣಂದೂರು ಅಬ್ದುಲ್ ಅಜೀಜ್(40) ಬಂಧಿತ 17 ಮಂದಿ ಆರೋಪಿಗಳು.

ಆರೋಪಿಗಳು ಜೂಜಾಟಕ್ಕೆ ಬಳಸಿದ 69 ಸಾವಿರ ರೂಪಾಯಿ ಹಣ , ಎರಡು ಆಟೋ ರಿಕ್ಷಾ, 20 ಮೊಬೈಲ್ ಫೋನ್ ವಶಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ 17 ಮಂದಿ ಆರೋಪಿಗಳ ವಿರುದ್ಧ ಕಲಂ 87 ಕೆ.ಪಿ.ಆಕ್ಟ್,112 BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ, ಎಎಸ್ಐ ವೆಂಕಟೇಶ್,ಸಿಬ್ಬಂದಿ ಅಬ್ದುಲ್ ಲತೀಫ್, ಕೃಷ್ಣ, ವಸಂತ, ಮೋಹನ, ರಾಕೇಶ್, ಕಾಳಮ್ಮ, ಕಾವೇರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!