29 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಮೇ 5ರಂದು ಲಾಯಿಲ ಗ್ರಾಮದ ಕರ್ನೋಡಿ ಆಕೆಶಿಯ ನೆಡುತೋಪಿನಲ್ಲಿ, ಸುಮಾರು 40-45 ವರ್ಷದ ಅಪರಿಚಿತ ಗಂಡಸು ಲುಂಗಿಯನ್ನು ಹಗ್ಗದಂತೆ ಮಾಡಿಕೊಂಡು, ಕಾಟು ಜಾತಿಯ ಮರದ ಕೊಂಬೆಗೆ ಮತ್ತು ಕುತ್ತಿಗೆಗೆ ಕಟ್ಟಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ವಾರೀಸುದಾರರು ಪತ್ತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಮನವಿ ಮಾಡಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಠಾಣಾ ಯು.ಡಿ.ಆರ್ ನಂಬ್ರ: 24/2026 ಕಲಂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಮೃತರ ವಯಸ್ಸು ಸುಮಾರು 40-45 ವರ್ಷ, ಎತ್ತರ 5ಅಡಿ 5 ಇಂಚು, ಚಹರೆ ಸಾಧಾರಣ ಶರೀರ, ಬಲ ಕೈಯ ಕೋಲು ಕೈಯ ಮುಂಭಾಗದ ಒಳ ಭಾಗದಲ್ಲಿ ಹಸಿರು ಮಿಶ್ರಿತ ಕಪ್ಪು ಬಣ್ಣದಲ್ಲಿ “ಕೃಷ್ಣ” ದೇವರ ಹಚ್ಚೆ ಇದ್ದು, ಅದರ ಕೆಳಗೆ ಆಂಗ್ಲ ಭಾಷೆಯಲ್ಲಿ “B” ಅಕ್ಷರವನ್ನು ಬರೆಯಲಾಗಿದೆ.

ಮೃತ ಗಂಡಸಿನ ವಿಳಾಸ ಅಥವಾ ವಾರೀಸುದಾರರು ಪತ್ತೆಯಾದಲ್ಲಿ ದ.ಕ ಜಿಲ್ಲಾ ಕಂಟ್ರೋಲ್ ರೂಂ ಅಥವಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಸಂಪರ್ಕ ಸಂಖ್ಯೆ: ದ.ಕ ಜಿಲ್ಲಾ ಕಂಟ್ರೋಲ್ ರೂಂ : 9480805300 ಬೆಳ್ತಂಗಡಿ ಪೊಲೀಸ್ ಠಾಣೆ: 08256-232093., ಪೊಲೀಸ್ ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆ : 9480805370.

Related posts

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗುರು ಪೂರ್ಣಿಮಾ ಆಚರಣೆ

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya
error: Content is protected !!