25.1 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಕಳಿಯ ಗ್ರಾಮ ಪಂಚಾಯತ್ ಅರಿವು ಗ್ರಂಥಾಲಯ ಕೇಂದ್ರದಲ್ಲಿ ಆರು ದಿನಗಳು ನಡೆದ ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ. ಕೆ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶಿಬಿರದಲ್ಲಿ ಭಾಗವಹಿಸಿದ ಸುಗಮಕಾರರು, ಪೋಷಕರು ಮತ್ತು ಪಂಚಾಯತಿ ಸಿಬ್ಬಂದಿಯವರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಜಯಲಕ್ಷ್ಮಿ, ಲಾಸ್ಯ. ಪಿ , ಸುಕೇಶ್ ಶಿಬಿರದ ಅನುಭವಗಳನ್ನು ಹಂಚಿಕೊಂಡರು. ಶಿಬಿರದಲ್ಲಿ ಸುಗಮಕಾರರಾಗಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ ಗೇರುಕಟ್ಟೆ, ಶಿಕ್ಷಕಿಗೀತಾ, ಯೋಗ ಪಟು ಸತೀಶ್ ಭಂಡಾರಿ, ಆರೋಗ್ಯ ಅಧಿಕಾರಿ ಡಾ. ನಾಗರಾಜ್, ಕ್ರಾಫ್ಟ್ ಶಿಕ್ಷಕ ಪ್ರವೀಣ್ ಇವರಿಗೆ ಪ್ರಶಂಸಾ ಪತ್ರ , ಸ್ಮರಣಿಕೆ ನೀಡಿ ಗೌರವಿಸಲಾಯಿತು.

ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ , ಪ್ರಮಾಣ ಪತ್ರ ನೀಡಲಾಯಿತು. ಶ್ರೀ ಕಾಳಿಕಾಂಬ ಯಕ್ಷಗಾನ ಟ್ರಸ್ಟ್ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಟ್ರಸ್ಟ್ ಪ್ರಾಯೋಜಿತ ಶ್ರೀ ಮಹಾಭಾರತ ಸರಣಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಿಗೆ ಪುಸ್ತಕ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.

ಶಿಬಿರಾರ್ಥಿಗಳಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಗುತ್ತಿಗೆದಾರ ನಿತೇಶ್ ಮಜಲು ,ಪಂಚಾಯತ್ ಸಿಬ್ಬಂದಿ ಐಸ್ ಕ್ರೀಮ್ ನೀಡಿ ಸಹಕರಿಸಿದರು . ಶಿಬಿರಾರ್ಥಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ ಅರಿವು ಕೇಂದ್ರದ ಮೇಲ್ವಿಚಾರಕಿ ಪ್ರಮೀಳಾ ವಂದಿಸಿದರು.

Related posts

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!