ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ಮತ್ತು ಕ್ಷೇತ್ರ ಸಮಿತಿ ವತಿಯಿಂದ ಎಜೆ ಡೆಂಟಲ್ ಹಾಸ್ಪಿಟಲ್, ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ ಬೆಳ್ತಂಗಡಿ ಧರ್ಮಸ್ಥಳ ಕಲಾಭವನದಲ್ಲಿ ಮೇ 17 ರಂದು ತಾಲೂಕು ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನಾ ಅಧ್ಯಕ್ಷ ಸಂಪತ್ ಬಿ. ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಆಧುನಿಕ ಮಾರುಕಟ್ಟೆಯಲ್ಲಿ ಸಿದ್ಧ ಉಡುಪುಗಳ ಹಾವಳಿಯಿಂದಾಗಿ ಟೈಲರ್ ಗಳ ಸಾಂಪ್ರದಾಯಿಕ ವೃತ್ತಿಗೆ ಮತ್ತು ಜೀವನೋಪಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಯಾರ ಮುಂದೆಯೂ ಕೈಚಾಚದೆ, ತಮ್ಮ ಸ್ವಂತ ಕೌಶಲ್ಯ ಮತ್ತು ಕಠಿಣ ಪರಿಶ್ರಮದ ಬಲದಿಂದ ಗೌರವಯುತ ಬದುಕು ಸಾಗಿಸುವ ಸ್ವಾವಲಂಬಿಗಳಾಗಿದ್ದಾರೆ.ಸಮಾಜದ ಪ್ರತಿಯೊಂದು ವರ್ಗದ ಜನರಿಗೂ ಅತ್ಯಾವಶ್ಯಕವಾಗಿರುವ ಇವರ ಸೇವೆಯನ್ನು ಗೌರವಿಸುವುದು ಮತ್ತು ಇವರ ಶ್ರಮಕ್ಕೆ ತಕ್ಕ ಪ್ರತಿಫಲ ಹಾಗೂ ಸಾಮಾಜಿಕ ಭದ್ರತೆ ಸಿಗುವಂತಾಗುವುದು ಇಂದಿನ ಅಗತ್ಯವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಶೈಲೇಶ್ ಆರ್ ಜೆ., ವಸಂತ ಪೂಜಾರಿ ನಿರ್ದೇಶಕ ಟೈಲರ್ಸ್ ಬ್ಯಾಂಕ್,. ಜಯಮಾಲ ಯೋಗೀಶ್ ಗೋಲ್ಡನ್ ಮೆಕೋವರ್ ಬ್ಯೂಟಿ ಪಾರ್ಲರ್ ಉಜಿರೆ ವಲಯದ ಅಧ್ಯಕ್ಷ ಝೀನತ್ ಉಜಿರೆ, ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಲಾನ್ಸ್ ಡಿಸೋಜ, ಯುವ ಉದ್ಯಮಿ ಟುವಿತ್ ಕೆ ಸಾಲಿಯನ್ ಉಪಸ್ಥಿತರಿದ್ದರು.












