ಬೆಳ್ತಂಗಡಿ: ಕಳೆದ ಮೂರುವರೆ ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಳ್ಳತ್ತಿರುವ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ ಸಮಾರಂಭವು ಮೇ 18ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ಜರುಗಿತು.
ವೇದಿಕೆಯಲ್ಲಿ ನ್ಯಾಯಾಧೀಶ ಮನು ಬಿಕೆ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಎಸ್. ಲೋಬೋ, ಉಪಾಧ್ಯಕ್ಷ ಶ್ರೀನಿವಾಸ್ ಗೌಡ, ಜೊತೆ ಕಾರ್ಯದರ್ಶಿ ಹರ್ಷಿತ್, ಕೋಶಾಧಿಕಾರಿ ಮುಮ್ತಾಜ್ ಬೇಗಂ, ಹಿರಿಯ ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ನ್ಯಾಯಾಲಯದ ಎಲ್ಲಾ ವಕೀಲರುಗಳ ಸಮ್ಮುಖದಲ್ಲಿ ವಿಜಯೇಂದ್ರ ಟಿ.ಎಚ್ ರವರನ್ನು ಸನ್ಮಾನಿಸಲಾಯಿತು.
ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ.ಸ್ವಾಗತಿಸಿದರು. ಅಪರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ನಿರೂಪಿಸಿದರು. ವಕೀಲರ ಸಂಘದ ಸದಸ್ಯರಾದ ಪ್ರತೀಕ್ಷಾ ಕೆ. ಆಚಾರ್ಯ ಮತ್ತು ಮನಿಷಾ ಕೆ.ಎಸ್ ಪ್ರಾರ್ಥಿಸಿದರು.












