28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮುಂಡಾಜೆ: ಕೀರ್ತನಾ ಕಲಾ ತಂಡ ಮುಂಡಾಜೆ ಇದರ ವತಿಯಿಂದ ತಂಡದ ವಿದ್ಯಾರ್ಥಿ ಸದಸ್ಯರಿಗೆ ಉಚಿತ ಪುಸ್ತಕಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧು ಶೆಟ್ಟಿ ಹುರ್ತಾಜೆ ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಪುಸ್ತಕದ ಪ್ರಾಯೋಜಕರಾದ ಹರೀಶ್ ಪೂಜಾರಿಯವರು ಮಕ್ಕಳಿಗೆ ಪುಸ್ತಕ ವಿತರಿಸಿದರು. ಮುಖ್ಯ ಅತಿಥಿ ನಂದೀಶ್ ಭಂಡಾರಿ ಕೆ ಮಕ್ಕಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಸ್ತಕವನ್ನು ನೀಡಿದ ಹರೀಶ್ ಪೂಜಾರಿ ಹಾಗೂ ನಂದೀಶ್ ಭಂಡಾರಿ ಕೆ ಇವರನ್ನು ಗೌರವ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಈ ವೇಳೆ ಗ್ರಾಮದಲ್ಲಿ ನಿಧನರಾದ ವಿಠಲ್ ರಾವ್ ಸಂಪಿಗೆ ಹಾಗೂ ಬಾಬು ಶೆಟ್ಟಿ ಭಾವಂತಬೆಟ್ಟು ಇವರ ಸ್ಮರಿಸಿ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತಂಡದ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ, ಪುರಂದರ ಗೌಡ, ತಂಡದ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ಕೇಶವ ಪೂಜಾರಿ ವಂದಿಸಿದರು. ಜಿತಿಕ್ಷಾ ನಿರೂಪಿಸಿದರು.

Related posts

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!