28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

ಬೆಳ್ತಂಗಡಿ: ತಾಲೂಕಿನ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇದರ ಗುಣಮಟ್ಟವನ್ನು ದೆಹಲಿಯ ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ವತಿಯಿಂದ ಮೇ 17ರಂದು ಪರಿಶೀಲಿಸಲಾಯಿತು.

ಸುಮಾರು 26 ಕಿ.ಮೀ. ಪ್ರದೇಶದಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಈ ಭಾಗದ ಅಲ್ಲಲ್ಲಿ ನಡೆದ ಕಾಂಕ್ರೀಟಿಕರಣ, ಡಾಮಾರಿಕರಣ, ಸೇತುವೆ ನಿರ್ಮಾಣ ತಡೆಗೋಡೆ ನಿರ್ಮಾಣ ಹಾಗೂ ಇನ್ನಿತರ ಕಾಮಗಾರಿಗಳ ಪರಿಶೀಲನೆ ನಡೆಯಿತು.

ಮುಂದಿನ ಕೆಲವೇ ದಿನಗಳಲ್ಲಿ ಮಳೆಗಾಲ ಕಾಲಿರಿಸಲಿದ್ದು,ಪ್ರಸ್ತುತ ರಸ್ತೆಯ ಸ್ಥಿತಿ ಹೇಗಿದೆ, ನಡೆದಿರುವ ಕಾಮಗಾರಿಗಳಲ್ಲಿ ಏನಾದರೂ ಲೋಪದೋಷಗಳಿವೆ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ಹಿರಿಯ ಅಧಿಕಾರಿ ಅಮಿತ್, ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಇ ಚಂದ್ರಶೇಖರ್ ಕೆ.ಟಿ., ಎಇಇ ಗುರುಪ್ರಸಾದ್, ಜಿತೇಂದ್ರ ಇತರ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಭಾಗವಹಿಸಿದ್ದರು.

Related posts

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya
error: Content is protected !!