July 4, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.17 ರಂದು ರಾತ್ರಿ 7:30 ಕ್ಕೆ ದಾಳಿ ಮಾಡಿದ್ದಾರೆ.

ಜೂಜಾಟ ಆಡುತ್ತಿದ್ದ ಪಡಂಗಡಿಯ ಅಶೋಕ್(37) ,ಪಡಂಗಡಿಯ ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35), ವೇಣೂರು ಕತ್ತೋಡಿಬೈಲಿನ ರಮೇಶ್(40) , ಕುಕ್ಕೇಡಿ ಬರ್ನತ್ಯಾರಿನ ರಾಜೇಶ್(42), ಕಾರ್ಕಳ ಮುಗಿರಡ್ಡಸ ಪ್ರಮೀತ್(35), ನಾರಾವಿ ಅರಸಿಕಟ್ಟೆಯ ಕರುಣಾಕರ(38), ವೇಣೂರು ಶಿವಾಜಿನಗರದ ಶೇಖರ್(50), ಮರೋಡಿಯ ಸಧಾಕರ(42), ಗರ್ಡಾಡಿಯ ನವಾಜ್(26), ಗೇರುಕಟ್ಟೆ ಜನತಾಕಾಲೋನಿಯ ಇಕ್ಬಾಲ್(37), ಕುಕ್ಕೇಡಿಯ ಕಿರಣ್(35), ವೇಣೂರು ಶಿವಾಜಿನಗರದ ಲಕ್ಷ್ಮಣ(51), ಬೆಳ್ತಂಗಡಿ ಲಾಯಿಲದ ನಿಸಾರ್(47), ಬೆಳ್ತಂಗಡಿ ತೆಂಕಎಡಪದವು ಜೀವಂಧರ್ ಕುಮಾರ್(36), ಗುರುವಾಯನಕೆರೆಯ ಸಂತೋಷ್(37), ಸೊಣಂದೂರು ಅಬ್ದುಲ್ ಅಜೀಜ್(40) ಬಂಧಿತ 17 ಮಂದಿ ಆರೋಪಿಗಳು.

ಆರೋಪಿಗಳು ಜೂಜಾಟಕ್ಕೆ ಬಳಸಿದ 69 ಸಾವಿರ ರೂಪಾಯಿ ಹಣ , ಎರಡು ಆಟೋ ರಿಕ್ಷಾ, 20 ಮೊಬೈಲ್ ಫೋನ್ ವಶಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ 17 ಮಂದಿ ಆರೋಪಿಗಳ ವಿರುದ್ಧ ಕಲಂ 87 ಕೆ.ಪಿ.ಆಕ್ಟ್,112 BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ, ಎಎಸ್ಐ ವೆಂಕಟೇಶ್,ಸಿಬ್ಬಂದಿ ಅಬ್ದುಲ್ ಲತೀಫ್, ಕೃಷ್ಣ, ವಸಂತ, ಮೋಹನ, ರಾಕೇಶ್, ಕಾಳಮ್ಮ, ಕಾವೇರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya
error: Content is protected !!