29.3 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

ಉಡುಪಿ: ಮಧುಮೇಹ ರೋಗಿಗಳಲ್ಲಿ ಪಾದದ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ, ಗಂಭೀರ ಪರಿಣಾಮಗಳು ಹಾಗೂ ಅಂಗಚ್ಛೇದನವನ್ನು ತಡೆಗಟ್ಟುವ ಉದ್ದೇಶದಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಕುತ್ಪಾಡಿ, ಉಡುಪಿ ಇದರ ಶಲ್ಯತಂತ್ರ ವಿಭಾಗವು, PRIAS (Podiatry Reach Across India for Awareness and Screening) ಸಂಸ್ಥೆಯ ಸಹಯೋಗದಲ್ಲಿ, 2026ರ ಮೇ 20 ಮತ್ತು ಮೇ 23ರಂದು ಉಡುಪಿಯ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರವನ್ನು ಆಯೋಜಿಸಿದೆ.

ಮಧುಮೇಹದಿಂದಾಗಿ ಪಾದಗಳಲ್ಲಿ ಉಂಟಾಗುವ ನರಗಳ ಸಂವೇದನೆ ಕುಂಠಿತವಾಗುವುದು, ರಕ್ತಪ್ರವಾಹದ ಅಡಚಣೆ ಹಾಗೂ ಪಾದದ ಮೇಲಿನ ಅಸಾಮಾನ್ಯ ಒತ್ತಡದಿಂದ ಹುಣ್ಣುಗಳು ಉಂಟಾಗುವಂತಹ ಸಮಸ್ಯೆಗಳು ಅನೇಕ ಬಾರಿ ಗಂಭೀರ ಸ್ಥಿತಿಗೆ ತಲುಪುತ್ತವೆ. ಇವುಗಳನ್ನು ಸಮಯೋಚಿತ ತಪಾಸಣೆಯ ಮೂಲಕ ತಡೆಗಟ್ಟಬಹುದಾಗಿದೆ.

ಶಿಬಿರದಲ್ಲಿ ಭಾಗವಹಿಸುವ ರೋಗಿಗಳಿಗೆ ಆಧುನಿಕ ತಪಾಸಣಾ ಸಾಧನಗಳ ಮೂಲಕ ಕೆಳಕಂಡ ಪರೀಕ್ಷೆಗಳು ನಡೆಸಲಾಗುತ್ತದೆ:
ಪಾದದ ತಳಭಾಗದ ನರಗಳ ಸಂವೇದನೆ (Neuropathy) ತಪಾಸಣೆ, ಕಾಲುಗಳಿಗೆ ರಕ್ತಪ್ರವಾಹ ಸಮರ್ಪಕವಾಗಿದೆಯೇ ಎಂಬುದನ್ನು ತಿಳಿಯುವ ABI ಪರೀಕ್ಷೆ, ಪಾದದ ಮೇಲೆ ಅಸಾಮಾನ್ಯ ಒತ್ತಡದಿಂದಾಗಿ (Abnormal loading) ಕಾರ್ನ್ (Corn) ಅಥವಾ ಕಾಲೋಸಿಟಿ (Callosity) ಉಂಟಾಮಾಡುವ ಸಾಧ್ಯತೆ ಇರುವುದನ್ನು ಪತ್ತೆಹಚ್ಚುವುದು. ಪಾದದ ಹುಣ್ಣನ್ನು ತಡೆಗಟ್ಟುವುದು.

ಮಧುಮೇಹ ರೋಗಿಗಳಲ್ಲಿ ಪಾದದ ಹುಣ್ಣು ಮತ್ತು ಅಂಗಚ್ಛೇದನದ ಅಪಾಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಶಿಬಿರ ಅತ್ಯಂತ ಉಪಯುಕ್ತವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಭಾರತದಾದ್ಯಂತ ೬೭ ನಗರಗಳಲ್ಲಿ ಈ ವಿಶೇಷ ಶಿಬಿರ ನಡೆಯುತ್ತಿದೆ. ಸೂಕ್ತ ಮಧುಮೇಹ ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅಗತ್ಯವಿರುವ ರೋಗಿಗಳನ್ನು ಶಿಬಿರಕ್ಕೆ ಕಳುಹಿಸುವಂತೆ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Related posts

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya
error: Content is protected !!