29 C
ಪುತ್ತೂರು, ಬೆಳ್ತಂಗಡಿ
August 22, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

ಬೆಳ್ತಂಗಡಿ: ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ದೋಟ ಎಂಬಲ್ಲಿ ಮೇ 15 ರಂದು ನಡೆದಿದೆ.

ಮೃತಪಟ್ಟ ಮಹಿಳೆ ಸಂಧ್ಯಾ (27ವ) ಆಗಿದ್ದು ಅವರ ಸಹೋದರ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಮೇ 16 ರಂದು ದೂರು ನೀಡಿದ್ದು ಪತಿ ಧನಂಜಯ್ ಮೇಲೆ ವರದಕ್ಷಿಣೆ ನಿಷೇಧ ಕಾಯಿದೆ ಅಡಿ ಪ್ರಕರಣ ದಾಖಲಾಗಿದ್ದು ಆತನನ್ನು ಪೊಲೀಸರು ಮೇ 17ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಯ ವಿವರ:
ಸಂಧ್ಯಾ ಎಂಬವರನ್ನು ಕಳೆದ ಮೂರು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ದೋಟ ವಾಸಿ ಧನಂಜಯ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದು ಅವರಿಗೆ 1 ವರ್ಷ 7 ತಿಂಗಳ ಹೆಣ್ಣು ಮಗು ಇದೆ. ಧನಂಜಯ ಪ್ರತೀ ದಿನ ಮದ್ಯಪಾನ ಮಾಡುತ್ತಿದ್ದು ಈ ಬಗ್ಗೆ ಮೃತ ಸಂಧ್ಯಾ ಆಕೆಯ ತಾಯಿಗೆ ಕರೆ ಮಾಡಿ ಗಂಡ ಪ್ರತಿ ನಿತ್ಯ ಮದ್ಯಪಾನ ಮಾಡಿ ಚಿನ್ನಾಭರಣ ಮತ್ತು ಹಣ ನೀಡಬೇಕೆಂದು ಕಿರುಕುಳ ನೀಡುತ್ತಿರುವುದಾಗಿ ತಿಳಿಸುತ್ತಿದ್ದಳು. ಈ ಬಗ್ಗೆ ತಾಯಿ ಇವತ್ತಲ್ಲಾ ನಾಳೆಯಾದರೂ ಸರಿಯಾಗಬಹುದೆಂದು ತಿಳಿದು ಸಮಾಧಾನ ಮಾಡುತ್ತಿದ್ದರು. ಮೇ 15ರಂದು ರಾತ್ರಿ ಸುಮಾರು 9.00 ಗಂಟೆಗೆ ಸಂಧ್ಯಾಳು ತನ್ನ ತಾಯಿಗೆ ಕರೆ ಮಾಡಿ ಇನ್ನು ಮುಂದೆ ನನ್ನ ಮಗುವನ್ನು ನೀವೇ ನೋಡಿಕೊಳ್ಳಿ ನನ್ನ ಜೀವನ ಮುಗಿದಂತೆ ಎಂದು ಕರೆ ಮಾಡಿ ತಿಳಿಸಿದ್ದರು. ತದನಂತರ ಆಕೆಯ ಮೊಬೈಲ್‌ಗೆ ಕರೆ ಮಾಡಿದಾಗ ನೆರೆಯವರು ಯಾರೋ ಮೊಬೈಲ್ ರಿಸೀವ್ ಮಾಡಿ ಅವರು ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಆಕೆಯನ್ನು ಆಂಬುಲೆನ್ಸ್‌ನಲ್ಲಿ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಧನಂಜಯ್ ಹೋಗಿರುವ ವಿಚಾರ ತಿಳಿದು ಕೂಡಲೆ ಆಸ್ಪತ್ರೆಗೆ ಹೋದಾಗ ಅಕ್ಕ ಸಂಧ್ಯಾಳನ್ನು ಪರೀಕ್ಷಿಸಿದ ವೈದ್ಯರು ಈಕೆ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ವಿಚಾರ ತಿಳಿಸಿರುತ್ತಾರೆ.

ಮೃತೆ ಸಂಧ್ಯಾ(27) ಎಂಬವರು ಆಕೆಯ ಗಂಡನ ಕಿರುಕುಳದಿಂದ ಅಥವಾ ಇನ್ಯಾವುದೋ ಉದ್ದೇಶದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನನೊಂದು ಮೇ 15ರಂದು ರಾತ್ರಿ 9.00 ಗಂಟೆಯಿಂದ 10.15ರ ಮದ್ಯ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಇವರ ಮರಣದ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಜರುಗಿಸಬೇಕೆಂದ ಮೃತಪಟ್ಟ ಸಂಧ್ಯಾರ ಸಹೋದರ ಬಂಟ್ವಾಳ ತಾಲೂಕಿನ ಸಜೀಪಮೂಡು ಕೋಮಲಿ ನಿವಾಸಿ ಸಂದೀಪ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ವರದಕ್ಷಿಣೆ ನಿಷೇಧ ಕಾಯಿದೆ ಅಡಿ, ಬಿಎನ್‌ಎಸ್ ಅಕ್ರಂ ೮೦,೮೫, ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!