27.1 C
ಪುತ್ತೂರು, ಬೆಳ್ತಂಗಡಿ
July 4, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

ಬೆಳ್ತಂಗಡಿ: ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ದೋಟ ಎಂಬಲ್ಲಿ ಮೇ 15 ರಂದು ನಡೆದಿದೆ.

ಮೃತಪಟ್ಟ ಮಹಿಳೆ ಸಂಧ್ಯಾ (27ವ) ಆಗಿದ್ದು ಅವರ ಸಹೋದರ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಮೇ 16 ರಂದು ದೂರು ನೀಡಿದ್ದು ಪತಿ ಧನಂಜಯ್ ಮೇಲೆ ವರದಕ್ಷಿಣೆ ನಿಷೇಧ ಕಾಯಿದೆ ಅಡಿ ಪ್ರಕರಣ ದಾಖಲಾಗಿದ್ದು ಆತನನ್ನು ಪೊಲೀಸರು ಮೇ 17ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಯ ವಿವರ:
ಸಂಧ್ಯಾ ಎಂಬವರನ್ನು ಕಳೆದ ಮೂರು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ದೋಟ ವಾಸಿ ಧನಂಜಯ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದು ಅವರಿಗೆ 1 ವರ್ಷ 7 ತಿಂಗಳ ಹೆಣ್ಣು ಮಗು ಇದೆ. ಧನಂಜಯ ಪ್ರತೀ ದಿನ ಮದ್ಯಪಾನ ಮಾಡುತ್ತಿದ್ದು ಈ ಬಗ್ಗೆ ಮೃತ ಸಂಧ್ಯಾ ಆಕೆಯ ತಾಯಿಗೆ ಕರೆ ಮಾಡಿ ಗಂಡ ಪ್ರತಿ ನಿತ್ಯ ಮದ್ಯಪಾನ ಮಾಡಿ ಚಿನ್ನಾಭರಣ ಮತ್ತು ಹಣ ನೀಡಬೇಕೆಂದು ಕಿರುಕುಳ ನೀಡುತ್ತಿರುವುದಾಗಿ ತಿಳಿಸುತ್ತಿದ್ದಳು. ಈ ಬಗ್ಗೆ ತಾಯಿ ಇವತ್ತಲ್ಲಾ ನಾಳೆಯಾದರೂ ಸರಿಯಾಗಬಹುದೆಂದು ತಿಳಿದು ಸಮಾಧಾನ ಮಾಡುತ್ತಿದ್ದರು. ಮೇ 15ರಂದು ರಾತ್ರಿ ಸುಮಾರು 9.00 ಗಂಟೆಗೆ ಸಂಧ್ಯಾಳು ತನ್ನ ತಾಯಿಗೆ ಕರೆ ಮಾಡಿ ಇನ್ನು ಮುಂದೆ ನನ್ನ ಮಗುವನ್ನು ನೀವೇ ನೋಡಿಕೊಳ್ಳಿ ನನ್ನ ಜೀವನ ಮುಗಿದಂತೆ ಎಂದು ಕರೆ ಮಾಡಿ ತಿಳಿಸಿದ್ದರು. ತದನಂತರ ಆಕೆಯ ಮೊಬೈಲ್‌ಗೆ ಕರೆ ಮಾಡಿದಾಗ ನೆರೆಯವರು ಯಾರೋ ಮೊಬೈಲ್ ರಿಸೀವ್ ಮಾಡಿ ಅವರು ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಆಕೆಯನ್ನು ಆಂಬುಲೆನ್ಸ್‌ನಲ್ಲಿ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಧನಂಜಯ್ ಹೋಗಿರುವ ವಿಚಾರ ತಿಳಿದು ಕೂಡಲೆ ಆಸ್ಪತ್ರೆಗೆ ಹೋದಾಗ ಅಕ್ಕ ಸಂಧ್ಯಾಳನ್ನು ಪರೀಕ್ಷಿಸಿದ ವೈದ್ಯರು ಈಕೆ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ವಿಚಾರ ತಿಳಿಸಿರುತ್ತಾರೆ.

ಮೃತೆ ಸಂಧ್ಯಾ(27) ಎಂಬವರು ಆಕೆಯ ಗಂಡನ ಕಿರುಕುಳದಿಂದ ಅಥವಾ ಇನ್ಯಾವುದೋ ಉದ್ದೇಶದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನನೊಂದು ಮೇ 15ರಂದು ರಾತ್ರಿ 9.00 ಗಂಟೆಯಿಂದ 10.15ರ ಮದ್ಯ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಇವರ ಮರಣದ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಜರುಗಿಸಬೇಕೆಂದ ಮೃತಪಟ್ಟ ಸಂಧ್ಯಾರ ಸಹೋದರ ಬಂಟ್ವಾಳ ತಾಲೂಕಿನ ಸಜೀಪಮೂಡು ಕೋಮಲಿ ನಿವಾಸಿ ಸಂದೀಪ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ವರದಕ್ಷಿಣೆ ನಿಷೇಧ ಕಾಯಿದೆ ಅಡಿ, ಬಿಎನ್‌ಎಸ್ ಅಕ್ರಂ ೮೦,೮೫, ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!