28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ಮತ್ತು ಕ್ಷೇತ್ರ ಸಮಿತಿ ವತಿಯಿಂದ ಎಜೆ ಡೆಂಟಲ್ ಹಾಸ್ಪಿಟಲ್, ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ ಬೆಳ್ತಂಗಡಿ ಧರ್ಮಸ್ಥಳ ಕಲಾಭವನದಲ್ಲಿ ಮೇ 17 ರಂದು ತಾಲೂಕು ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನಾ ಅಧ್ಯಕ್ಷ ಸಂಪತ್ ಬಿ. ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಆಧುನಿಕ ಮಾರುಕಟ್ಟೆಯಲ್ಲಿ ಸಿದ್ಧ ಉಡುಪುಗಳ ಹಾವಳಿಯಿಂದಾಗಿ ಟೈಲರ್ ಗಳ ಸಾಂಪ್ರದಾಯಿಕ ವೃತ್ತಿಗೆ ಮತ್ತು ಜೀವನೋಪಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಯಾರ ಮುಂದೆಯೂ ಕೈಚಾಚದೆ, ತಮ್ಮ ಸ್ವಂತ ಕೌಶಲ್ಯ ಮತ್ತು ಕಠಿಣ ಪರಿಶ್ರಮದ ಬಲದಿಂದ ಗೌರವಯುತ ಬದುಕು ಸಾಗಿಸುವ ಸ್ವಾವಲಂಬಿಗಳಾಗಿದ್ದಾರೆ.ಸಮಾಜದ ಪ್ರತಿಯೊಂದು ವರ್ಗದ ಜನರಿಗೂ ಅತ್ಯಾವಶ್ಯಕವಾಗಿರುವ ಇವರ ಸೇವೆಯನ್ನು ಗೌರವಿಸುವುದು ಮತ್ತು ಇವರ ಶ್ರಮಕ್ಕೆ ತಕ್ಕ ಪ್ರತಿಫಲ ಹಾಗೂ ಸಾಮಾಜಿಕ ಭದ್ರತೆ ಸಿಗುವಂತಾಗುವುದು ಇಂದಿನ ಅಗತ್ಯವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಶೈಲೇಶ್ ಆರ್ ಜೆ., ವಸಂತ ಪೂಜಾರಿ ನಿರ್ದೇಶಕ ಟೈಲರ್ಸ್ ಬ್ಯಾಂಕ್,. ಜಯಮಾಲ ಯೋಗೀಶ್ ಗೋಲ್ಡನ್ ಮೆಕೋವರ್ ಬ್ಯೂಟಿ ಪಾರ್ಲರ್ ಉಜಿರೆ ವಲಯದ ಅಧ್ಯಕ್ಷ ಝೀನತ್ ಉಜಿರೆ, ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಲಾನ್ಸ್‌ ಡಿಸೋಜ, ಯುವ ಉದ್ಯಮಿ ಟುವಿತ್ ಕೆ ಸಾಲಿಯನ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya
error: Content is protected !!