28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ಸಹಯೋಗದಲ್ಲಿ ಪಟ್ಲ ಫೌಂಡೇಶನ್ ಹವ್ಯಾಸಿ ಘಟಕ ಮಂಗಳೂರು ಇದರ ಹತ್ತನೇ ಕಾರ್ಯಕ್ರಮವಾಗಿ ಉಪ್ಪಿನಂಗಡಿ ಶ್ರೀ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತರನ ಪೌರುಷ ತಾಳಮದ್ದಳೆ ಜರಗಿತು.

ಯಕ್ಷದ್ರುವ ಪಟ್ಲ ಫೌಂಡೇಶನ್ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಜಗದೀಶ ಶೆಟ್ಟಿ .ಕೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ. ಕಳೆದ 11 ವರ್ಷಗಳಿಂದ ಯಕ್ಷಗಾನದ ಸಮಗ್ರ ಬೆಳವಣಿಗೆಗೆ ಪಟ್ಲ ಫೌಂಡೇಶನ್ ವತಿಯಿಂದ ನಡೆಸಲಾಗುತ್ತಿರುವ ಕಾರ್ಯಕ್ರಮಗಳು ಅಪೂರ್ವವಾಗಿದೆ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಹವ್ಯಾಸಿ ಘಟಕದ ಅಧ್ಯಕ್ಷ ರಾಜಾರಾಮ ಹೊಳ್ಳ ಕೈ, ಕಾರ್ಯದರ್ಶಿ ವಿನಯ ಆಚಾರ್ ಹೊಸಬೆಟ್ಟು, ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಗೌರವ ಅಧ್ಯಕ್ಷ ಉಮೇಶ ಶೆಣೈ ,ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ, ಅಂಬಾ ಪ್ರಸಾದ ಪಾತಾಳ,ಬಿ ಸುಬ್ರಹ್ಮಣ್ಯರಾವ್, ಸುರೇಶ ಪುತ್ತುರಾಯ ಇಚ್ಚೂರು,ಗೀತಾ ಕುದ್ದಣ್ಣಾಯ, ಗಂಗಾಧರ ಟೈಲರ್ ಉಪ್ಪಿನಂಗಡಿ, ಸುರೇಶ ರಾವ್. ಬಿ ಆಶಾ ರಾವ್, ಸುಶಾಂತ್ ಉಪಸ್ಥಿತರಿದ್ದರು. ಅತಿಥಿ ಕಲಾವಿದರನ್ನು ಶಾಲು ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.

ಉತ್ತರನ ಪೌರುಷ ತಾಳಮದ್ದಳೆ ಯಲ್ಲಿ ಭಾಗವತರಾಗಿ ರಾಜಾರಾಮ ಹೊಳ್ಳ, ಪದ್ಮನಾಭ ಕುಲಾಲ್ ಇಳಂತಿಲ ಹಿಮ್ಮೇಳದಲ್ಲಿ ಮುರಳಿಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್, ಹರಿಶ್ಚಂದ್ರ ನಾಯ್ಗ ಮಾಡೂರು, ಅರ್ಥಧಾರಿಗಳಾಗಿ ವಿನಯ ಆಚಾರ್ ಹೊಸಬೆಟ್ಟು (ಉತ್ತರ) ದಿವಾಕರ ಆಚಾರ್ಯ ಗೇರುಕಟ್ಟೆ (ಉತ್ತರೆ) ಶ್ರೀಧರ ಎಸ್ ಪಿ ಕೃಷ್ಣಾಪುರ (ಗೋಪಾಲಕ) ಗಣೇಶ ಕುಂಜತ್ತೂರು (ಬೃಹನ್ನಳೆ) ಭಾಗವಹಿಸಿದ್ದರು. ಕಾಳಿಕಾಂಬ ಯಕ್ಷಗಾನ ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ಕೆ. ಮಹಾಲಿಂಗೇಶ್ವರ ಭಟ್ ವಂದಿಸಿದರು. ಶ್ರೀಧರ ಎಸ್ ಪಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪ.ಪೂ. ವಿಭಾಗದಲ್ಲಿ “ಹೂಡಿಕೆಯ ವಿವಿಧ ಅವಕಾಶ” ಗಳ ಕುರಿತು ಕಾರ್ಯಾಗಾರ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!