28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮುಂಡಾಜೆ: ಕೀರ್ತನಾ ಕಲಾ ತಂಡ ಮುಂಡಾಜೆ ಇದರ ವತಿಯಿಂದ ತಂಡದ ವಿದ್ಯಾರ್ಥಿ ಸದಸ್ಯರಿಗೆ ಉಚಿತ ಪುಸ್ತಕಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧು ಶೆಟ್ಟಿ ಹುರ್ತಾಜೆ ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಪುಸ್ತಕದ ಪ್ರಾಯೋಜಕರಾದ ಹರೀಶ್ ಪೂಜಾರಿಯವರು ಮಕ್ಕಳಿಗೆ ಪುಸ್ತಕ ವಿತರಿಸಿದರು. ಮುಖ್ಯ ಅತಿಥಿ ನಂದೀಶ್ ಭಂಡಾರಿ ಕೆ ಮಕ್ಕಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಸ್ತಕವನ್ನು ನೀಡಿದ ಹರೀಶ್ ಪೂಜಾರಿ ಹಾಗೂ ನಂದೀಶ್ ಭಂಡಾರಿ ಕೆ ಇವರನ್ನು ಗೌರವ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಈ ವೇಳೆ ಗ್ರಾಮದಲ್ಲಿ ನಿಧನರಾದ ವಿಠಲ್ ರಾವ್ ಸಂಪಿಗೆ ಹಾಗೂ ಬಾಬು ಶೆಟ್ಟಿ ಭಾವಂತಬೆಟ್ಟು ಇವರ ಸ್ಮರಿಸಿ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತಂಡದ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ, ಪುರಂದರ ಗೌಡ, ತಂಡದ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ಕೇಶವ ಪೂಜಾರಿ ವಂದಿಸಿದರು. ಜಿತಿಕ್ಷಾ ನಿರೂಪಿಸಿದರು.

Related posts

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya
error: Content is protected !!