24.7 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮುಂಡಾಜೆ: ಕೀರ್ತನಾ ಕಲಾ ತಂಡ ಮುಂಡಾಜೆ ಇದರ ವತಿಯಿಂದ ತಂಡದ ವಿದ್ಯಾರ್ಥಿ ಸದಸ್ಯರಿಗೆ ಉಚಿತ ಪುಸ್ತಕಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧು ಶೆಟ್ಟಿ ಹುರ್ತಾಜೆ ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಪುಸ್ತಕದ ಪ್ರಾಯೋಜಕರಾದ ಹರೀಶ್ ಪೂಜಾರಿಯವರು ಮಕ್ಕಳಿಗೆ ಪುಸ್ತಕ ವಿತರಿಸಿದರು. ಮುಖ್ಯ ಅತಿಥಿ ನಂದೀಶ್ ಭಂಡಾರಿ ಕೆ ಮಕ್ಕಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಸ್ತಕವನ್ನು ನೀಡಿದ ಹರೀಶ್ ಪೂಜಾರಿ ಹಾಗೂ ನಂದೀಶ್ ಭಂಡಾರಿ ಕೆ ಇವರನ್ನು ಗೌರವ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಈ ವೇಳೆ ಗ್ರಾಮದಲ್ಲಿ ನಿಧನರಾದ ವಿಠಲ್ ರಾವ್ ಸಂಪಿಗೆ ಹಾಗೂ ಬಾಬು ಶೆಟ್ಟಿ ಭಾವಂತಬೆಟ್ಟು ಇವರ ಸ್ಮರಿಸಿ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತಂಡದ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ, ಪುರಂದರ ಗೌಡ, ತಂಡದ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ಕೇಶವ ಪೂಜಾರಿ ವಂದಿಸಿದರು. ಜಿತಿಕ್ಷಾ ನಿರೂಪಿಸಿದರು.

Related posts

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya
error: Content is protected !!