25.1 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

ಬೆಳ್ತಂಗಡಿ: ತಾಲೂಕಿನ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇದರ ಗುಣಮಟ್ಟವನ್ನು ದೆಹಲಿಯ ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ವತಿಯಿಂದ ಮೇ 17ರಂದು ಪರಿಶೀಲಿಸಲಾಯಿತು.

ಸುಮಾರು 26 ಕಿ.ಮೀ. ಪ್ರದೇಶದಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಈ ಭಾಗದ ಅಲ್ಲಲ್ಲಿ ನಡೆದ ಕಾಂಕ್ರೀಟಿಕರಣ, ಡಾಮಾರಿಕರಣ, ಸೇತುವೆ ನಿರ್ಮಾಣ ತಡೆಗೋಡೆ ನಿರ್ಮಾಣ ಹಾಗೂ ಇನ್ನಿತರ ಕಾಮಗಾರಿಗಳ ಪರಿಶೀಲನೆ ನಡೆಯಿತು.

ಮುಂದಿನ ಕೆಲವೇ ದಿನಗಳಲ್ಲಿ ಮಳೆಗಾಲ ಕಾಲಿರಿಸಲಿದ್ದು,ಪ್ರಸ್ತುತ ರಸ್ತೆಯ ಸ್ಥಿತಿ ಹೇಗಿದೆ, ನಡೆದಿರುವ ಕಾಮಗಾರಿಗಳಲ್ಲಿ ಏನಾದರೂ ಲೋಪದೋಷಗಳಿವೆ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ಹಿರಿಯ ಅಧಿಕಾರಿ ಅಮಿತ್, ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಇ ಚಂದ್ರಶೇಖರ್ ಕೆ.ಟಿ., ಎಇಇ ಗುರುಪ್ರಸಾದ್, ಜಿತೇಂದ್ರ ಇತರ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಭಾಗವಹಿಸಿದ್ದರು.

Related posts

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!