26.8 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

ಬೆಳ್ತಂಗಡಿ: ತಾಲೂಕಿನ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇದರ ಗುಣಮಟ್ಟವನ್ನು ದೆಹಲಿಯ ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ವತಿಯಿಂದ ಮೇ 17ರಂದು ಪರಿಶೀಲಿಸಲಾಯಿತು.

ಸುಮಾರು 26 ಕಿ.ಮೀ. ಪ್ರದೇಶದಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಈ ಭಾಗದ ಅಲ್ಲಲ್ಲಿ ನಡೆದ ಕಾಂಕ್ರೀಟಿಕರಣ, ಡಾಮಾರಿಕರಣ, ಸೇತುವೆ ನಿರ್ಮಾಣ ತಡೆಗೋಡೆ ನಿರ್ಮಾಣ ಹಾಗೂ ಇನ್ನಿತರ ಕಾಮಗಾರಿಗಳ ಪರಿಶೀಲನೆ ನಡೆಯಿತು.

ಮುಂದಿನ ಕೆಲವೇ ದಿನಗಳಲ್ಲಿ ಮಳೆಗಾಲ ಕಾಲಿರಿಸಲಿದ್ದು,ಪ್ರಸ್ತುತ ರಸ್ತೆಯ ಸ್ಥಿತಿ ಹೇಗಿದೆ, ನಡೆದಿರುವ ಕಾಮಗಾರಿಗಳಲ್ಲಿ ಏನಾದರೂ ಲೋಪದೋಷಗಳಿವೆ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ಹಿರಿಯ ಅಧಿಕಾರಿ ಅಮಿತ್, ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಇ ಚಂದ್ರಶೇಖರ್ ಕೆ.ಟಿ., ಎಇಇ ಗುರುಪ್ರಸಾದ್, ಜಿತೇಂದ್ರ ಇತರ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಭಾಗವಹಿಸಿದ್ದರು.

Related posts

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya
error: Content is protected !!