ಬೆಳ್ತಂಗಡಿ: ಕಲ್ಮಂಜ ಗ್ರಾಮದ ಪಜಿರಡ್ಕ ಕೆಳಭಾಗದಲ್ಲಿ ನೇತ್ರಾವತಿ ನದಿಗೆ ಇಳಿದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ. 18 ರಂದು ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಗೋಕಾಕ ಮೂಲದ ಇಂಜಿನಿಯರಿಂಗ್ ಕೊನೆಯ ವರ್ಷದ ವಿದ್ಯಾರ್ಥಿ ಶ್ರೀ ಪೂರ್ಣ (22) ಎಂಬಾತನ ಮೃತದೇಹವು ನದಿಯ ಹೊಂಡದಲ್ಲಿ ರಾತ್ರಿ 9:30ಕ್ಕೆ ಪತ್ತೆಯಾಗಿದೆ.
ಮೃತದೇಹವನ್ನು ಹೊರತೆಗೆಯಲು ಧರ್ಮಸ್ಥಳ ಪೊಲೀಸರು, ಅಗ್ನಿಶಾಮಕದಳ, ಶೌರ್ಯ ವಿಪತ್ತು ಪಡೆ ಹಾಗೂ ಸ್ಥಳೀಯರ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.












