ಬೆಳ್ತಂಗಡಿ: ಎಂಡೋ ಪೀಡಿತರಾಗಿ ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆ ನಿವಾಸಿ 9 ರ ಬಾಲೆಗೆ ದಿನಸಿ ಸಾಮಾಗ್ರಿ ಮತ್ತು ಆರ್ಥಿಕ ನೆರವು ಹಸ್ತಾಂತರಿಸುವ ಮೂಲಕ ಮುಂಡಾಜೆಯ ಪುಟ್ಟ ಬಾಲಕ ರಿಯಾನ್ಷ್ ತನ್ನ 7 ನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.
ಮುಂಡಾಜೆಯ “ಖುಷಿ ಸ್ಟುಡಿಯೋ” ಮತ್ತು “ಈಶ ಮಲ್ಟಿ ಬ್ರ್ಯಾಂಡ್ ಕಾರ್ ಕೇರ್ ಸೆಂಟರ್” ಇದರ ಮಾಲಿಕರಾಗಿರುವ ರಾಕೇಶ್ ನಾಯ್ಕ್ ಅವರ ಪುತ್ರ ರಿಯಾನ್ಷ್ ಅವರ ಹುಟ್ಟುಹಬ್ಬವನ್ನು ಈ ರೀತಿ ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಆಚರಿಸಿದ್ದಾರೆ.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರ ಮೂಲಕ ಈ ಅರ್ಹ ಕುಟುಂಬವನ್ನು ಮೇ18 ರಂದು ಅವರ ಬಾಡಿಗೆ ನಿವಾಸದಲ್ಲಿ ಭೇಟಿ ಮಾಡಿ ನೆರವು ಹಸ್ತಾಂತರಿಸಿದರು.
ಕೂಲಿ ಕಾರ್ಮಿಕರಾಗಿರುವ ಪ್ರಶಾಂತ್ ಮತ್ತು ಗೃಹಿಣಿ ಲಾವಣ್ಯ ದಂಪತಿ ಪುತ್ರಿ ಮಾನ್ಯ ಎಂಡೋಸಲ್ಫಾನ್ ಪೀಡಿತೆಯಾಗಿದ್ದು ವಿಶೇಷ ಚೇತನೆಯಾಗಿದ್ದಾರೆ. ದಂಪತಿಯ ಹಿರಿ ಮಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.












