23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

ಬೆಳ್ತಂಗಡಿ: ಎಂಡೋ ಪೀಡಿತರಾಗಿ ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆ ನಿವಾಸಿ 9 ರ ಬಾಲೆಗೆ ದಿನಸಿ ಸಾಮಾಗ್ರಿ ಮತ್ತು ಆರ್ಥಿಕ ನೆರವು ಹಸ್ತಾಂತರಿಸುವ ಮೂಲಕ ಮುಂಡಾಜೆಯ ಪುಟ್ಟ ಬಾಲಕ ರಿಯಾನ್ಷ್ ತನ್ನ 7 ನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.

ಮುಂಡಾಜೆಯ “ಖುಷಿ ಸ್ಟುಡಿಯೋ” ಮತ್ತು “ಈಶ ಮಲ್ಟಿ ಬ್ರ್ಯಾಂಡ್ ಕಾರ್ ಕೇರ್ ಸೆಂಟರ್” ಇದರ ಮಾಲಿಕರಾಗಿರುವ ರಾಕೇಶ್ ನಾಯ್ಕ್ ಅವರ ಪುತ್ರ ರಿಯಾನ್ಷ್ ಅವರ ಹುಟ್ಟುಹಬ್ಬವನ್ನು ಈ ರೀತಿ ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಆಚರಿಸಿದ್ದಾರೆ.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರ ಮೂಲಕ ಈ ಅರ್ಹ ಕುಟುಂಬವನ್ನು ಮೇ18 ರಂದು ಅವರ ಬಾಡಿಗೆ ನಿವಾಸದಲ್ಲಿ ಭೇಟಿ ಮಾಡಿ ನೆರವು ಹಸ್ತಾಂತರಿಸಿದರು.

ಕೂಲಿ ಕಾರ್ಮಿಕರಾಗಿರುವ ಪ್ರಶಾಂತ್ ಮತ್ತು ಗೃಹಿಣಿ ಲಾವಣ್ಯ ದಂಪತಿ ಪುತ್ರಿ ಮಾನ್ಯ ಎಂಡೋಸಲ್ಫಾನ್ ಪೀಡಿತೆಯಾಗಿದ್ದು ವಿಶೇಷ ಚೇತನೆಯಾಗಿದ್ದಾರೆ. ದಂಪತಿಯ ಹಿರಿ ಮಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Related posts

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!