29.3 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

ಬೆಳ್ತಂಗಡಿ: ಎಂಡೋ ಪೀಡಿತರಾಗಿ ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆ ನಿವಾಸಿ 9 ರ ಬಾಲೆಗೆ ದಿನಸಿ ಸಾಮಾಗ್ರಿ ಮತ್ತು ಆರ್ಥಿಕ ನೆರವು ಹಸ್ತಾಂತರಿಸುವ ಮೂಲಕ ಮುಂಡಾಜೆಯ ಪುಟ್ಟ ಬಾಲಕ ರಿಯಾನ್ಷ್ ತನ್ನ 7 ನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.

ಮುಂಡಾಜೆಯ “ಖುಷಿ ಸ್ಟುಡಿಯೋ” ಮತ್ತು “ಈಶ ಮಲ್ಟಿ ಬ್ರ್ಯಾಂಡ್ ಕಾರ್ ಕೇರ್ ಸೆಂಟರ್” ಇದರ ಮಾಲಿಕರಾಗಿರುವ ರಾಕೇಶ್ ನಾಯ್ಕ್ ಅವರ ಪುತ್ರ ರಿಯಾನ್ಷ್ ಅವರ ಹುಟ್ಟುಹಬ್ಬವನ್ನು ಈ ರೀತಿ ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಆಚರಿಸಿದ್ದಾರೆ.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರ ಮೂಲಕ ಈ ಅರ್ಹ ಕುಟುಂಬವನ್ನು ಮೇ18 ರಂದು ಅವರ ಬಾಡಿಗೆ ನಿವಾಸದಲ್ಲಿ ಭೇಟಿ ಮಾಡಿ ನೆರವು ಹಸ್ತಾಂತರಿಸಿದರು.

ಕೂಲಿ ಕಾರ್ಮಿಕರಾಗಿರುವ ಪ್ರಶಾಂತ್ ಮತ್ತು ಗೃಹಿಣಿ ಲಾವಣ್ಯ ದಂಪತಿ ಪುತ್ರಿ ಮಾನ್ಯ ಎಂಡೋಸಲ್ಫಾನ್ ಪೀಡಿತೆಯಾಗಿದ್ದು ವಿಶೇಷ ಚೇತನೆಯಾಗಿದ್ದಾರೆ. ದಂಪತಿಯ ಹಿರಿ ಮಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Related posts

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya
error: Content is protected !!