23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಎಸ್.ಡಿ.ಎಂ. ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ಮೂಲದ ಗಗನ ಏರ್ ಕಂಡೀಷನರ್ಸ್ HVAC ಸೊಲ್ಯೂಷನ್ಸ್ ಸಂಸ್ಥೆಯಿಂದ ರೆಫ್ರೀಜರೇಶನ್ ಮತ್ತು ಹವಾನಿಯಂತ್ರಿತ ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ವ್ಯವಸ್ಥಾಪಕರಾದ ಶ್ರೀಮತಿ ಜೀವಿತಾ ಹಾಗೂ ಗಂಗಾಧರ್ ಪೂಜಾರಿ ಅವರು ಸಂದರ್ಶನ ಪ್ರಕ್ರಿಯೆಯನ್ನು ನಡೆಸಿದರು. RAC ತಾಂತ್ರಿಕ ವಿಭಾಗದ ಒಟ್ಟು 86 ತರಬೇತಿ ಪಡೆದ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಂಗಾಧರ್ ಪೂಜಾರಿಯವರು ಅವರು, ಇಂದಿನ ದಿನಗಳಲ್ಲಿ HVAC ಹಾಗೂ ಏರ್ ಕಂಡೀಷನಿಂಗ್ ಕ್ಷೇತ್ರದಲ್ಲಿ ತಾಂತ್ರಿಕ ಪರಿಣತಿ ಹೊಂದಿರುವ ಯುವಕರಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಾಯೋಗಿಕ ಜ್ಞಾನ ಮತ್ತು ಶಿಸ್ತಿನೊಂದಿಗೆ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಲಭ್ಯವಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ. ಆರ್. ಉಪಸ್ಥಿತರಿದ್ದರು. ನೇಮಕಾತಿ ಅಧಿಕಾರಿ ಶ್ರೇಯಸ್ ಜೈನ್ ಸಂಘಟಿಸಿ, ವಿನಯಚಂದ್ರರಾಜ ಹಾಗೂ ಸತೀಶ್ ಸಹಕರಿಸಿದರು.

Related posts

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya
error: Content is protected !!