25.4 C
ಪುತ್ತೂರು, ಬೆಳ್ತಂಗಡಿ
July 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ


ಉಜಿರೆ : ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಮಾನ್ಯತೆ ಪಡೆದ ಹಾಗೂ ಕಳೆದ ಇಪ್ಪತ್ತು ವರುಷಗಳಿಂದ ಉಜಿರೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ, ಇಲ್ಲಿ 2026-27 ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕನಿಷ್ಠ ಹತ್ತನೇ (10ನೇ) ನೇ ತರಗತಿ ಉತ್ತೀರ್ಣರಾದ ಅಥವಾ ಪಿ.ಯು.ಸಿ ಹಾಗೂ ಹೆಚ್ಚಿನ ವಿದ್ಯಾಭ್ಯಾಸ ಪಡೆದ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯ “ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ” ಹಾಗೂ “ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್” ಎಂಬ ವೃತ್ತಿಗೆ ಸೇರಲು ಅವಕಾಶವಿದೆ, ವರುಷದ ಕೊನೆಗೆ ನಡೆಯುವ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಕೇಂದ್ರ ಸರಕಾರದಿಂದ ನೀಡುವ “ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರವನ್ನು ನೀಡಲಾಗುವುದರ ಜೊತೆಗೆ ವಿವಿಧ ಕಂಪನಿಗಳಾದBOSCH Bangalore, SHAHI EXPORTS Bangalore, Mysure, Hassan, HIMATHSINGKA LENINS Hassan, SOWKAR TEXTAILS Mangalore, SIRI GRAMODYOGA SAMSTHE Belthangady, TOYOTA KIRLOSKAR AUTO PARTS Ltd Bangalore ಉತ್ತಮ ಮುಂತಾದ ರಾಷ್ಟ್ರೀಯ ಹಾಗೂ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಉದ್ಯೋಗ ಅವಕಾಶ ಮಾಡಿಕೊಡಲಾಗುವುದು. ಮಹಿಳೆಯರು ಸ್ವಾವಲಂಭಿಗಳಾಗಿ ಬದುಕಲು ಈ ಸಂಸ್ಥೆಯಲ್ಲಿ ಉತ್ತಮ ಅವಕಾಶವನ್ನು ಕಲ್ಪಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಛೇರಿ ದೂರವಾಣಿ ಸಂಖ್ಯೆ : 08256-236800 ಅಥವಾ ಪ್ರಾಂಶುಪಾಲರ ಸಂಖ್ಯೆ 9449200768/6360573395 ಸಂಪರ್ಕಿಸಬಹುದು

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya
error: Content is protected !!