24.2 C
ಪುತ್ತೂರು, ಬೆಳ್ತಂಗಡಿ
July 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಹತ್ತು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ.18ರಂದು ರಾತ್ರಿ ನಡೆದಿದೆ.

ಕೋರ್ಟ್ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ಹಾಗೂ ಮೆಮೊರಿ ಕಾರ್ಡ್ ನನ್ನು ಹಾನಿಗೊಳಿಸಿ ಪರಾರಿಯಾಗಿದ್ದಾರೆ. ಹಾಗೂ ಅದೇ ಕಟ್ಟಡದ ಮಹಮ್ಮದ್ ಹನೀಫ್ ರವರ ಟಿ.ಎಚ್ ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲಕರ ಕಚೇರಿ ಸೇರಿದಂತೆ ವಕೀಲರುಗಳಾದ ರಾಧಾಕೃಷ್ಣ , ಉಷಾ ಎನ್.ಜಿ, ಯತೀಶ್ ಶೆಟ್ಟಿ ಪಿ ಕಚೇರಿಗಳಿಗೆ ನುಗ್ಗಿದ್ದಾರೆ.

ಮೂರು ಮಾರ್ಗದ ಬಳಿ ಇರುವ ಮಾತೃಶ್ರೀ ಹೋಟೆಲ್ ನಿಂದ ಡಬ್ಬಿಯಿಂದ ರೂ.5000 ಹಾಗೂ ಡ್ರಾವರ್ ನಿಂದ ರೂ.2000ಸಾವಿರ, ಶಬರಿ ಎಂಟರ್ಪ್ರೈಸಸ್ ಸುಮಾರು ರೂ. 2ಸಾವಿರ, ಜಯರಾಮ ಮಣಿಯಾಣಿ ವಕೀಲರ ಕಚೇರಿ, ಮೆ| ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟ್ಮೆಂಟ್ , ಜಿತೇಶ್ ಕೆ ವಕೀಲರ ಕಚೇರಿಗೆ ನುಗ್ಗಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya
error: Content is protected !!