23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಹತ್ತು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ.18ರಂದು ರಾತ್ರಿ ನಡೆದಿದೆ.

ಕೋರ್ಟ್ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ಹಾಗೂ ಮೆಮೊರಿ ಕಾರ್ಡ್ ನನ್ನು ಹಾನಿಗೊಳಿಸಿ ಪರಾರಿಯಾಗಿದ್ದಾರೆ. ಹಾಗೂ ಅದೇ ಕಟ್ಟಡದ ಮಹಮ್ಮದ್ ಹನೀಫ್ ರವರ ಟಿ.ಎಚ್ ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲಕರ ಕಚೇರಿ ಸೇರಿದಂತೆ ವಕೀಲರುಗಳಾದ ರಾಧಾಕೃಷ್ಣ , ಉಷಾ ಎನ್.ಜಿ, ಯತೀಶ್ ಶೆಟ್ಟಿ ಪಿ ಕಚೇರಿಗಳಿಗೆ ನುಗ್ಗಿದ್ದಾರೆ.

ಮೂರು ಮಾರ್ಗದ ಬಳಿ ಇರುವ ಮಾತೃಶ್ರೀ ಹೋಟೆಲ್ ನಿಂದ ಡಬ್ಬಿಯಿಂದ ರೂ.5000 ಹಾಗೂ ಡ್ರಾವರ್ ನಿಂದ ರೂ.2000ಸಾವಿರ, ಶಬರಿ ಎಂಟರ್ಪ್ರೈಸಸ್ ಸುಮಾರು ರೂ. 2ಸಾವಿರ, ಜಯರಾಮ ಮಣಿಯಾಣಿ ವಕೀಲರ ಕಚೇರಿ, ಮೆ| ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟ್ಮೆಂಟ್ , ಜಿತೇಶ್ ಕೆ ವಕೀಲರ ಕಚೇರಿಗೆ ನುಗ್ಗಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!