22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಮಾಧವ ಎಂ ಇವರು ಉದ್ಘಾಟಿಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯಂತ ಉತ್ಸಾಹದ ದಿನ ಪ್ರತಿಭಾ ಪುರಸ್ಕಾರ ದಿನ. ಈ ಶೈಕ್ಷಣಿಕ ಸಾಲಿನ ತಮ್ಮ ಪ್ರತಿಭೆಗಳನ್ನು ಇಂದು ಪುರಸ್ಕರಿಸಲಾಗಿದೆ. ನೀವು ಭವಿಷ್ಯದಲ್ಲಿಯೂ ಸಹ ಈ ರೀತಿ ಅನೇಕ ಪುರಸ್ಕಾರಗಳಿಗೆ ಪಾತ್ರರಾಗಬೇಕು. ಹೆಜ್ಜೆ ಮುಂದಿಟ್ಟ ಹಿಂದೆ ನೋಡದೆ ಜೀವನದಲ್ಲಿ ಮುಂದುವರಿಯಬೇಕು ಎಂದು ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸುತ್ತಾ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಇನ್ಸೈಟ್ ಎಂಬ ಸಪ್ತಾಹಿಕ ಪತ್ರಿಕೆಯ 27ನೇ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ., ಸಾಂಸ್ಕೃತಿಕ ಸಂಚಾಲಕರಾದ ಪ್ರೊ. ಮಾರುತಿ, ಐಕ್ಯುಎಸಿ ಸಹ ಸಂಚಾಲಕರಾದ ಡಾ. ರವಿ ಎಂ. ಎನ್. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್ ಬಿ ಹಾಗೂ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಪದಾಧಿಕಾರಿಗಳಾದ ಕುಮಾರಿ ವೀಕ್ಷಿತ, ಸಂತೋಷ್, ನಿತಿನ್ ಶೆಟ್ಟಿ, ವೈಷ್ಣವಿ, ರಕ್ಷಿತಾ, ಸುಭಾಷ, ಹೇಮಂತ್, ಮಂಜುಳಾ, ಸಂಗೀತ ಅಂಕಿತ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಿರ್ವಹಣಾ ವಿಭಾಗದ ಪ್ರೊ. ರಶ್ಮಿ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು, ಡಾ. ರಾಧಾಕೃಷ್ಣ ಹೆಚ್.ಬಿ. ಕ್ರೀಡಾ ವಿಭಾಗದ ವಿಜೇತರ ಪಟ್ಟಿಯನ್ನು ಮತ್ತು ಪ್ರೊ| ಮಾರುತಿ ಇವರು ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಪಟ್ಟಿಯನ್ನು ಓದಿದರು. ರಾಜ್ಯಶಾಸ್ತ್ರ ಮುಖ್ಯಸ್ಥರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪುರುಷೋತ್ತಮ್ ಭಟ್ ವಂದಿಸಿದರು.

Related posts

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಕಳೆಂಜ: ಬರೆಮೇಲು ನಿವಾಸಿ ಗಣಪನ ಗೌಡ ನಿಧನ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya
error: Content is protected !!