22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

ಬೆಳ್ತಂಗಡಿ: ಎಂಡೋ ಪೀಡಿತರಾಗಿ ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆ ನಿವಾಸಿ 9 ರ ಬಾಲೆಗೆ ದಿನಸಿ ಸಾಮಾಗ್ರಿ ಮತ್ತು ಆರ್ಥಿಕ ನೆರವು ಹಸ್ತಾಂತರಿಸುವ ಮೂಲಕ ಮುಂಡಾಜೆಯ ಪುಟ್ಟ ಬಾಲಕ ರಿಯಾನ್ಷ್ ತನ್ನ 7 ನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.

ಮುಂಡಾಜೆಯ “ಖುಷಿ ಸ್ಟುಡಿಯೋ” ಮತ್ತು “ಈಶ ಮಲ್ಟಿ ಬ್ರ್ಯಾಂಡ್ ಕಾರ್ ಕೇರ್ ಸೆಂಟರ್” ಇದರ ಮಾಲಿಕರಾಗಿರುವ ರಾಕೇಶ್ ನಾಯ್ಕ್ ಅವರ ಪುತ್ರ ರಿಯಾನ್ಷ್ ಅವರ ಹುಟ್ಟುಹಬ್ಬವನ್ನು ಈ ರೀತಿ ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಆಚರಿಸಿದ್ದಾರೆ.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರ ಮೂಲಕ ಈ ಅರ್ಹ ಕುಟುಂಬವನ್ನು ಮೇ18 ರಂದು ಅವರ ಬಾಡಿಗೆ ನಿವಾಸದಲ್ಲಿ ಭೇಟಿ ಮಾಡಿ ನೆರವು ಹಸ್ತಾಂತರಿಸಿದರು.

ಕೂಲಿ ಕಾರ್ಮಿಕರಾಗಿರುವ ಪ್ರಶಾಂತ್ ಮತ್ತು ಗೃಹಿಣಿ ಲಾವಣ್ಯ ದಂಪತಿ ಪುತ್ರಿ ಮಾನ್ಯ ಎಂಡೋಸಲ್ಫಾನ್ ಪೀಡಿತೆಯಾಗಿದ್ದು ವಿಶೇಷ ಚೇತನೆಯಾಗಿದ್ದಾರೆ. ದಂಪತಿಯ ಹಿರಿ ಮಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!