28.3 C
ಪುತ್ತೂರು, ಬೆಳ್ತಂಗಡಿ
August 22, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲದ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ.19 ರಂದು ಸಂಜೆ 4 ಗಂಟೆ ಸುಮಾರಿಗೆ ಏಳು ಸ್ನೇಹಿತರ ತಂಡ ಈಜಲು ಹೋಗಿ ಓರ್ವ ಬೆಳ್ತಂಗಡಿ ತಾಲೂಕಿನ ಉಜಿರೆ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್(ಈಸಿಎ) ವಿದ್ಯಾರ್ಥಿ ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ(21) ಎಂಬಾತ ನೀರುಪಾಲಾಗಿದ್ದಾನೆ ಎನ್ನಲಾಗಿದೆ. ನದಿಯಲ್ಲಿ ಯುವಕನ ಮೃತದೇಹ ಪತ್ತೆಗಾಗಿ ಹುಡುಕಾಟ ನಡೆಸಿದ್ರೂ ಈವರೆಗೂ ಪತ್ತೆಯಾಗಿಲ್ಲ. ನಾಳೆಗೆ ಕಾರ್ಯಾಚರಣೆ ಮುಂದೂಡಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯರು,ಅಗ್ನಿಶಾಮಕ ದಳ, ಶೌರ್ಯ ವಿಪತ್ತು ಪಡೆ ಆಗಮಿಸಿ ಮೃತದೇಹವನ್ನು ರಾತ್ರಿ 9:25 ರವೆರ ಗಂಟೆ ವರೆಗೂ ಹುಡುಕಾಟ ನಡೆಸಿದ್ರೂ ಪತ್ತೆಯಾಗಿಲ್ಲ. ಇಂದಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ನಾಳೆ ಮತ್ತೆ ಹುಡುಕಾಟಕ್ಕಾಗಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಸಹಕಾರ ನೀಡಿದ್ದಾರೆ.

Related posts

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗುರು ಪೂರ್ಣಿಮಾ ಆಚರಣೆ

Suddi Udaya
error: Content is protected !!