24.7 C
ಪುತ್ತೂರು, ಬೆಳ್ತಂಗಡಿ
July 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ: ರೆಖ್ಯ ಗ್ರಾಮದ ದೇವಸ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಆಗಮಿಸಿದ್ದ ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪದ ಉದನೆ ಹೊಳೆಯ ಸಮೀಪದಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದ್ದಾರೆ.

ಅವರು ಮೇ 17 ರಂದು ಸಂಜೆ 4.15 ರ ಬಳಿಕ ಕಣ್ಮರೆಯಾಗಿದ್ದರು.ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸಿಗದೇ ಇದ್ದಾಗ ಆತಂಕಗೊಂಡ ಕುಟುಂಬದವರು ಪತ್ತೆ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸಹಕಾರ ಕೇಳಿದ್ದರು. ಕೂಡಲೇ ಸ್ಪಂದಿಸಿದ ಶಿಶಿಲ ಅರಶಿನಮಕ್ಕಿ ಘಟಕದ ಸ್ವಯಂಸೇವಕರು ಹುಡುಕಾಟ ನಡೆಸಿದ್ದರು. ನಾಪತ್ತೆಯಾಗಿದ್ದ ಮಾರನೆಯ ದಿನ ಶೌರ್ಯ ತಂಡದ ಸ್ವಯಂಸೇವಕರು ಮತ್ತು ಸ್ಥಳೀಯರು ಸುತ್ತಲಿನ ಅರಣ್ಯ ಪ್ರದೇಶ, ನದಿ, ಗುಡ್ಡಗಾಡು, ಕೆರೆ ಮತ್ತಿತರ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಹುಡುಕಿದರೂ ಪತ್ತೆಯಾಗಿರಲಿಲ್ಲ.

ಇಂದು ಮೇ19 “ಶೌರ್ಯ” ತಂಡದ ಸದಸ್ಯರು, ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸದಸ್ಯರು ಹಾಗೂಸ್ಥಳೀಯರು ಬೆಳಿಗ್ಗೆಯಿಂದಲೇ ಹುಡುಕುವ ಕಾರ್ಯಾಚರಣೆ ನಡೆಸಿದ್ದರು.ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪದ ಉದನೆ ಹೊಳೆಯ ಸಮೀಪದಲ್ಲಿ ಇಂದು ಮಧ್ಯಾಹ್ನ ಸುಮಾರು 2.15 ರ ವೇಳೆಗೆ ನಿತ್ರಾಣವಾಗಿ ಕುಳಿತಿದ್ದ ಅಶ್ವಿತ್ ಕುಮಾರ್ ಅವರನ್ನು ಯುವಕರು ಪತ್ತೆಹಚ್ಚಿದ್ದಾರೆ. ಎರಡು ದಿನದ ಬಳಿಕ ದೊರೆತ ಅಶ್ವಿನ್ ಅವರು ನಿತ್ರಾಣಗೊಂಡಿದ್ದು ಅವರನ್ನು ಸ್ಥಳೀಯರು ಹಾಗೂ ಶೌರ್ಯ ತಂಡದ ಸದಸ್ಯರು ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ.

ಎರಡು ದಿನಗಳ ಹುಡುಕಾಟ ನಡೆಸಲು ಶ್ರಮಿಸಿದ ಸ್ವಯಂಸೇವಕರಿಗೆ ಅಶ್ವಿನ್ ಕುಮಾರ್ ಅವರ ಕುಟುಂಬದ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಾದ ಅನಿಲ್ ಕುಮಾರ್ ಎಸ್.ಎಸ್ ರವರು ಸ್ವಯಂಸೇವಕರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ವಯಂಸೇವಕರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಮಾಸ್ಟರ್ ಅವಿನಾಶ್ ಭಿಡೆ ಇವರ ನೇತ್ರತ್ವದಲ್ಲಿ ಶಿಶಿಲ ಅರಶಿನಮಕ್ಕಿ ಘಟಕದ ಸ್ವಯಂಸೇವಕರು ಯಶಸ್ವೀ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದರು. ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಘಟಕ ಪ್ರತಿನಿಧಿ ಸುಲೈಮಾನ್, ರವೀಂದ್ರ, ಘಟಕ ಸಂಯೋಜಕಿ ರಶ್ಮಿತಾ ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!