August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

ಬೆಳ್ತಂಗಡಿ: ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್ ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನಾಯಕ ನರ್ವಾಡೆ ಶಾಲಾ ಮಕ್ಕಳಿಗೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅತೀ ಅಗತ್ಯವಾಗಿದೆ. ಕುತ್ಲೂರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ ಹಾಗೂ ಯು ಕೆ ಜಿ ತರಗತಿ ಆರಂಭಿಸಲು ಅಗತ್ಯವಿರುವ ಕೊಠಡಿ ನಿರ್ಮಾಣ ಸೇರಿದಂತೆ ಈ ಶಾಲೆಯ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬಿಎಎಸ್ಎಫ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಎಸ್‌ಡಿಎಂಸಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಮಾರ್ದೊಟ್ಟು, ಮಾಜಿ ಅಧ್ಯಕ್ಷೆ ಆಶಾಲತಾ, ಗಾಯತ್ರಿ, ಹರ್ಷಿತ್, ಅಮೃತ್ ಕುಮಾರ್ ಪುಟಾಣಿಗಳಾದ ಸಾಹಿತ್ಯ, ಹೃಷಿಕ್, ಹರ್ಷ್, ಅಧ್ವಿನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!