28.1 C
ಪುತ್ತೂರು, ಬೆಳ್ತಂಗಡಿ
May 20, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

ಮುಂಡಾಜೆ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭವು ಮೇ 20 ರಂದು ಸೋಮಂತಡ್ಕ ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ನೂತನ ಶಾಖೆಯನ್ನು ಮುಂಡಾಜೆ ಸಂತ ಮೇರಿ ಚರ್ಚ್ ನ ಧರ್ಮಗುರು ಫಾ. ಶಿಬಿ ಪುದಿಯರ ಉದ್ಘಾಟಿಸಿ ಶುಭಹಾರೈಸಿದರು. ಉಜಿರೆ ಸಂತ ಅಂತೋನಿ ಚರ್ಚಿನ ಧರ್ಮಗುರು ಫಾ. ಅಬೆಲ್ ಲೋಬೊ ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆನ್ರಿ ಲೋಬೊ ವಹಿಸಿದರು.

ಮುಂಡಾಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಭದ್ರತಾ ಕೊಠಡಿ ಉದ್ಘಾಟಿಸಿದರು. ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದರು. ಮುಂಡಾಜೆ ಗ್ರಾಪಂ ಮಾಜಿ ಅಧ್ಯಕ್ಷ ಗಣೇಶ್ ಬಂಗೇರ, ಕಟ್ಟಡದ ಮಾಲಕ ಜಿ. ಮಹಮ್ಮದ್, ಸಂಘದ ಉಪಾಧ್ಯಕ್ಷ ಡೇನಿಸ್ ಸಿಕ್ವೇರ, ನಿರ್ದೇಶಕರಾದ ಜೇಮ್ಸ್ ಡಿಸೋಜ, ಜೋಸೆಫ್ ಪೀಟರ್ ಸಲ್ದಾನ, ಹೆರಾಲ್ಡ್ ಪಿಂಟೋ, ಅಲ್ಫೋನ್ಸ್ ರೊಡ್ರಿಗಸ್, ವಿನ್ಸೆಂಟ್ ಪ್ರಕಾಶ್ ಪಿಂಟೋ, ತೋಮಸ್ ಆರ್. ನೊರೊನ್ಹಾ, ಪ್ರಸಾದ್ ಪಿಂಟೋ,ರಫಾಯಲ್ ವೇಗಸ್, ಪೌಲಿನ್ ರೇಗೊ, ಪ್ಲಾವಿಯ ಡಿಸೋಜಾ, ವೃತ್ತಿಪರ ನಿರ್ದೇಶಕರಾದ ವಿನಯ್ ಜಾನ್ಸನ್ ಡಿಸೋಜ, ರಿಯೋ ಮೈಕಲ್ ರೊಡ್ರಿಗಸ್, ಸಿಇಒ ಐವನ್ ಗೊನ್ಸಾಲಿಸ್ ಉಪಸ್ಥಿತರಿದ್ದರು.


ಡಾ. ವಿಶಾಲ್ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ಸೋಮಂತಡ್ಕ ಶಾಖೆಯ ವ್ಯವಸ್ಥಾಪಕಿ ಸುನಿತಾ ಪಾಯಸ್ ವಂದಿಸಿದರು.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
error: Content is protected !!