August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

ಬೆಳ್ತಂಗಡಿ: ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್ ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನಾಯಕ ನರ್ವಾಡೆ ಶಾಲಾ ಮಕ್ಕಳಿಗೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅತೀ ಅಗತ್ಯವಾಗಿದೆ. ಕುತ್ಲೂರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ ಹಾಗೂ ಯು ಕೆ ಜಿ ತರಗತಿ ಆರಂಭಿಸಲು ಅಗತ್ಯವಿರುವ ಕೊಠಡಿ ನಿರ್ಮಾಣ ಸೇರಿದಂತೆ ಈ ಶಾಲೆಯ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬಿಎಎಸ್ಎಫ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಎಸ್‌ಡಿಎಂಸಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಮಾರ್ದೊಟ್ಟು, ಮಾಜಿ ಅಧ್ಯಕ್ಷೆ ಆಶಾಲತಾ, ಗಾಯತ್ರಿ, ಹರ್ಷಿತ್, ಅಮೃತ್ ಕುಮಾರ್ ಪುಟಾಣಿಗಳಾದ ಸಾಹಿತ್ಯ, ಹೃಷಿಕ್, ಹರ್ಷ್, ಅಧ್ವಿನ್ ಉಪಸ್ಥಿತರಿದ್ದರು.

Related posts

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya
error: Content is protected !!