28.7 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಮೇ 18ರಂದು ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ,ಸಂಜೆ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಕಲಾಕೇಂದ್ರ ಶಿಶಿಲ ಇದರ ವಿದ್ಯಾರ್ಥಿಗಳ ರಂಗಪ್ರವೇಶ ಮತ್ತು ಶ್ರೀ ಶಿಶಿಲೇಶ್ವರ ಮಹಿಳಾ ಮತ್ತು ಮಕ್ಕಳ ಯಕ್ಷಕಲಾ ಸಂಘ ಶಿಶಿಲ ಇವರಿಂದ ವೀರಮಣಿ ಕಾಳಗ ಯಕ್ಷಗಾನ ಪ್ರಸಂಗ ನಡೆಯಿತು. ಈ ವೇಳೆ ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ ನೀಡಿದರು.

ಮೇ 19ರಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು ನಡೆದು ರಾತ್ರಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಶಾಸಕರ ಭೇಟಿ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಸುನೀಲ್ ಗೋಖಲೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ, ಜಯರಾಮ ನೆಲ್ಲಿತ್ತಾಯ ಶಿಶಿಲ, ಗ್ರಾ.ಪಂ. ಮಾಜಿ ಅಧ್ಯಕ್ಷರುಗಳಾದ ಸಂದೀಪ್ ಅಮ್ಮುಡಂಗೆ, ಸುದೀನ್ ಡಿ, ಆನಂದ ಪೂಜಾರಿ ದೆನೋಡಿ, ಗ್ರಾಮಸ್ಥರಾದ ರಾಧಕೃಷ್ಣ ಗುತ್ತು, ಕರುಣಾಕರ ಶಿಶಿಲ, ಊರವರು ಉಪಸ್ಥಿತರಿದ್ದರು.

ಮೇ 21ರಂದು ಪೂರ್ವಾಹ್ನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ ಜರುಗಲಿದೆ.

Related posts

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya
error: Content is protected !!