28 C
ಪುತ್ತೂರು, ಬೆಳ್ತಂಗಡಿ
May 20, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಳಂಜ ವಲಯಾಧ್ಯಕ್ಷರಾಗಿ ಸಮಾಜ ಸೇವಕರಾದ ಸದಾನಂದ ಸಾಲಿಯಾನ್ ಬಳಂಜ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಳಂಜ ಗ್ರಾ.ಪಂ ಉಪಾಧ್ಯಕ್ಷರಾಗಿ, ಪ್ರಗತಿ ಬಂಧು ಒಕ್ಕೂಟ ಬಳಂಜ ಇದರ ಅಧ್ಯಕ್ಷರಾಗಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಜನಜಾಗೃತಿ ವೇದಿಕೆ ಬಳಂಜ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಬಳಂಜ ಬದಿನಡೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿಯ ಅಧ್ಯಕ್ಷರಾಗಿ, ಟೈಲರ್ಸ್ ಅಸೋಸಿಯೇಷನ್ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿರುವ ಸದಾನಂದ ಸಾಲಿಯಾನ್ ಬಳಂಜರವರು ಹಲವಾರು ಸಮಾಜಮುಖಿ ಕೆಲಸವನ್ನು ಮಾಡುತ್ತಾ ಬರುತ್ತಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯು ರಾಜ್ಯ ಮಟ್ಟದಲ್ಲಿ ದುಶ್ಚಟ ಮುಕ್ತ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ನಿಸ್ವಾರ್ಥ ಸೇವೆಯನ್ನು ನೀಡುತ್ತಿದ್ದು ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆ ಮತ್ತು ಮಾರ್ಗದರ್ಶನದಿಂದ ರಾಜ್ಯಾದ್ಯಂತ ಹಲವಾರು ಮದ್ಯವರ್ಜನ ಶಿಬಿರಗಳನ್ನು ನಡೆಸಿ ಸಾವಿರಾರು ಮದ್ಯ ವ್ಯಸನಿಗಳನ್ನು ಮದ್ಯ ಮುಕ್ತರನ್ನಾಗಿಸಿ ಲಕ್ಷಾಂತರ ಕುಟುಂಬಗಳು ಇಂದು ಮಧ್ಯಪಾನದಂತಹ ವ್ಯಸನದಿಂದ ಹೊರ ಬಂದು ನವಜೀವನವನ್ನು ನಡೆಸಿಕೊಂಡು ಬರುತ್ತಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!