ಕುಕ್ಕೇಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದಲ್ಲಿ 7 ದಿನಗಳ ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ. ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಕಾಯ೯ದಶಿ೯ ಕುಂಞ. ಕೆ ರವರು ಶಿಬಿರದ ಮಹತ್ವ, ಹಾಗೂ ಪ್ರಯೋಜನವನ್ನು ತಿಳಿಸಿ ಕೊಟ್ಟರು. ಸುಗಮಕಾರರು, ಪಂ. ಸಿಬ್ಬಂದಿ ಗಳು ಉಪಸ್ಥಿತರಿದ್ದು ಶಿಬಿರದಲ್ಲಿ ಭಾಗವಹಿಸಿದ ಸುಮಾರು 25 ಮಕ್ಕಳಿಗೆ ಪ್ರಮಾಣ ಪತ್ರವನ್ನು ನೀಡಿದರು. ಪಂಚಾಯತ್ ವತಿಯಿಂದ ಉಪಹಾರದ ವ್ಯವಸ್ಥೆಯನ್ನು ಮಾಡಲಾಯಿತು.












